https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ರಾಜ್ಯ ಸರ್ಕಾರ ರಚಿಸಿರುವ ಏಕಸದಸ್ಯ ಸಮಿತಿ’ಯ ತನಿಖೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದ್ದು, ಇದನ್ನು ಪ್ರಶ್ನಿಸಿ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಲಡ್ಡು ವಿವಾದದ ಕುರಿತು ಆಡಳಿತಾತ್ಮಕ ಲೋಪಗಳನ್ನು ಪತ್ತೆಹಚ್ಚಲು ಎಪಿ ಸರ್ಕಾರ ರಚಿಸಿರುವ ಏಕಸದಸ್ಯ ಸಮಿತಿಯು ತನ್ನ ತನಿಖೆಯನ್ನು ಮುಂದುವರಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಈಗಾಗಲೇ ಸಿಬಿಐ ನೇತೃತ್ವದ ವಿಶೇಷ ತನಿಖಾ ದಳವನ್ನು (SIT) ನೇಮಿಸಿರುವಾಗ, ರಾಜ್ಯ ಸರ್ಕಾರ ಮತ್ತೊಂದು ಸಮಿತಿ ರಚಿಸುವುದು ಸರಿಯಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ವಾದಿಸಿದ್ದರು. ಆದರೆ, ನ್ಯಾಯಾಲಯ ಈ ವಾದವನ್ನು ಒಪ್ಪದೆ ಅರ್ಜಿಯನ್ನು ವಜಾಗೊಳಿಸಿತು.