https://youtube.com/shorts/tAQS6h_SZWA?si=f1t_2CedcPuoHdto
Subscribe ನ್ಯೂಸಿಕ್ಸ್ ಕನ್ನಡ
newsics.com
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಕರಾವಳಿ ರಾಜ್ಯಗಳು ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ.ಭಾರೀ ಬಿಸಿಲಿನ ನಡುವೆ ಮಲೆನಾಡು ಭಾಗಕ್ಕೆ ವರುಣ ತಂಪೆರೆದಿದ್ದಾನೆ.
ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದೆ. ಈ ಅಕಾಲಿಕ ಮಳೆ, ಬಿಸಿಲ ಝಳಕ್ಕೆ ಕೆಂಡದಂತಾಗಿದ್ದ ಭೂಮಿ ತಂಪಾಗುವಂತೆ ಮಾಡಿದ್ದು, ಮಳೆ ಕಂಡು ಮಲೆನಾಡಿಗರು ಸಂತಸಕೊಂಡಿದ್ದಾರೆ.
ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗ್ತಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.