newsics.com
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.
ನಿಗಮ ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ‘ಟಿವಿ-9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯ ಲಭಿಸಿದೆ. ಈ ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ನವದೆಹಲಿಯ ದ ಇಂಪೀರಿಯಲ್ ಜನಪತ್ ಲೇನ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವಹರ್ಷ ಮಲ್ಹೋತ್ರಾ ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕಿ ಡಾ. ಕೆ. ನಂದಿನಿ ದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಸೀಸನ್ 11ರ ನಿರೂಪಣೆಗೆ ಕಿಚ್ಚ ಡೌಟ್;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!