newsics.com
ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಉದ್ಯೋಗಳನ್ನು ನೀಡುವ ಪರಿಪಾಠದಂತೆ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಹರಿಯಾಣ ಸರ್ಕಾರ ಅವರಿಗೆ ಉದ್ಯೋಗದ ಭರವಸೆ ಕೊಟ್ಟಿತ್ತು. ಆದರೆ ಅವರು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದ ಭಾರತದ ಶೂಟರ್ ಸರಬ್ಜೋತ್ ಸಿಂಗ್ ಅವರು ದೇಶ ವ್ಯಾಪಿ ಖ್ಯಾತಿ ಪಡೆದುಕೊಂಡಿದ್ದಾರೆ.
ನನ್ನ ಕುಟುಂಬವು ನನ್ನಲ್ಲಿ ಯೋಗ್ಯ ಕೆಲಸವನ್ನು ಪಡೆಯುವಂತೆ ಹೇಳುತ್ತಿದೆ. ಆದರೆ ನಾನು ಶೂಟಿಂಗ್ನಲ್ಲಿಯೇ ಮುಂದುವರಿಸಲು ಬಯಸುತ್ತೇನೆ. ನಾನು ತೆಗೆದುಕೊಂಡ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗ ಕೆಲಸ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.