newsics.com
ಬೆಂಗಳೂರು: ದೆಹಲಿಯಂತೆಯೇ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದ್ದು, ಈ ತಿಂಗಳ ಕೊನೆಗೆ ಲೋಕಾರ್ಪಣೆಗೊಳ್ಳಲಿದೆ.
ಇದು ಅಂಡರ್ಗ್ರೌಂಡ್ ಮಾರುಕಟ್ಟೆಯಾಗಿದ್ದು, ಹವಾನಿಯಂತ್ರಿತ ಮಾರುಕಟ್ಟೆಯಾಗಿರಲಿದೆ. ಈ ಹೊಸ ಮಾರುಕಟ್ಟೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಸಮೀಪವಿದೆ.
ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾದ ಈ ಬಜಾರ್ನಲ್ಲಿ 75ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಸ್ಟಾಲ್ ಹಂಚಿಕೆಗೆ ಸಂಬಂಧಿಸಿ ವ್ಯಾಪಾರಿಗಳಲ್ಲಿ ಗೊಂದಲ ಉಂಟಾಗಿದ್ದು, ಭೂಗತ ವ್ಯವಸ್ಥೆಯಲ್ಲಿ ವ್ಯಾಪಾರದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ.
ಈ ಹೊಸ ಮಾರುಕಟ್ಟೆ ನಿರ್ಮಾಣವಾಗಿರುವ ಪ್ರದೇಶದಲ್ಲಿ ಈ ಹಿಂದೆ 150ಕ್ಕೂ ಹೆಚ್ಚು ಮಾರಾಟಗಾರರು ತರಕಾರಿಗಳು, ಹೂವುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯಾಪಾರ ವಹಿವಾಟುಗಳು ನಡೆಯುತ್ತಿದ್ದವು.
ಹೊಸ ಅಂಡರ್ಗ್ರೌಂಡ್ ಮಾರುಕಟ್ಟೆಗೆ ಸ್ಥಳಾವಕಾಶ ಕಲ್ಪಿಸಲು ಹಳೆಯ ಸರ್ವೀಸ್ ರಸ್ತೆಯನ್ನು ಪರಿವರ್ತಿಸಲಾಗಿದೆ. 2017ರ ಡಿಸೆಂಬರ್ನಲ್ಲಿ ಶುರುವಾದ ಯೋಜನೆ ಇದಾಗಿದೆ.
ನೂತನ ಅಂಡರ್ ಗ್ರೌಂಡ್ ಪಾಲಿಕೆ ಬಜಾರ್ 100 ಮೀಟರ್ ಉದ್ದ, 11 ಮೀಟರ್ ಅಗಲ ಇದ್ದು, 3 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ. ಪಾದಚಾರಿ ಮಾರ್ಗದ ಎರಡೂ ಬದಿಗೆ 75ಕ್ಕೂ ಹೆಚ್ಚು ಮಳಿಗೆಗಳಿವೆ.
ಬದಲಿ ನಿವೇಶನ ಕೇಳಿ ಸಿಎಂ ಸಿದ್ದರಾಮಯ್ಯ ಮುಡಾಗೆ ಬರೆದಿದ್ದ ಪತ್ರ ವೈರಲ್!
ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಫ್ಲರ್ಟ್! ಪತ್ನಿ ಕಿಯಾರಾ ಅಡ್ವಾನಿಗೆ ಕ್ಷಮೆ ಕೋರಿದ ಮಾಡೆಲ್