newsics.com
ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಏಳು ಜನರು ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡಿರುವ ಘಟನೆ ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯ ಮಗ್ಗುಂಪುರ್ನಲ್ಲಿ ನಡೆದಿದೆ.
ಗಾಯಾಳುಗಳನ್ನು ಮಖ್ಯುಂಪುರ್ ಮತ್ತು ಜೆಹಾನಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರಾವಣ ಮಾಸದ ನಾಲ್ಕನೇ ಸೋಮವಾರದಂದು ದೇವಾಲಯದ ಒಳಗೆ ಜನದಟ್ಟಣೆ ಹೆಚ್ಚಾದಾಗ ಈ ಘಟನೆ ನಡೆದಿದೆ. ಭಾನುವಾರ ರಾತ್ರಿಯಿಂದಲೇ ಸಿದ್ದೇಶ್ವರನಾಥ ದೇಗುಲದಲ್ಲಿ ಭಕ್ತರ ದಂಡೇ ಇತ್ತು ಎಂದು ದೇಗುಲದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ದೇವಸ್ಥಾನದಲ್ಲಿದ್ದವರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಓಡಲಾರಂಭಿಸಿದರು, ಇದರಿಂದಾಗಿ ಹತ್ತಾರು ಜನರು ದೇವಾಲಯದ ಆವರಣದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡರು.