newsics.com
ಚಾಮುಂಡಿ ಬೆಟ್ಟಕ್ಕೆ ರಿಟ್ ಅರ್ಜಿ ಸಲ್ಲಿಸಿರುವ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವ ವಿಚಾರವಾಗಿ ಮಾತನಾಡಿದೆ ಪ್ರಮೋದಾ ದೇವಿ, ಕೆಲವರು ಭೂಮಿ ಕಳೆದುಕೊಂಡರೆ ಅದು ಭೂಮಿ ನಾವು ಕಳೆದುಕೊಂಡದ್ದು ಭೂಮಿ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ನಮಗೂ ಭೂಮಿಗೆ ಪರ್ಯಾಯ ಭೂಮಿ ಕೊಡಬೇಕು ಅಲ್ವಾ? ಬೇರೆಯವರು ಕೇಳಿದಾಗ ಕೊಡುವವರು ನಾವು ಕೇಳಿದಾಗ ಏಕೆ ಕೊಡುವುದಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಪರೋಕ್ಷವಾಗಿ ಕುಟುಕಿದ್ದಾರೆ.
ಸರ್ವೇ ನಂಬರ್ 4 ಕುರುಬರಹಳ್ಳಿ ಸಿದ್ಧಾರ್ಥ್ ಲೇಔಟ್, ವಿಜಯಶ್ರೀಪುರ ಬಡಾವಣೆಗಳೆಲ್ಲವೂ ಕೂಡ ನಮ್ಮದೇ ಭೂಮಿ ಮುಡಾ ನಮ್ಮ ಹೆಸರಿನಲ್ಲಿರುವ ಹಲವು ಭೂಮಿಯನ್ನು ವಶಪಡಿಸಿಕೊಂಡಿದೆ.ಅದು 1 ಎಕರೆ, 100 ಎಕರೆ, ಸಾವಿರ ಎಕರೆಯೇ ಆಗಿರಬಹುದು, ನಮಗೂ ಸರ್ಕಾರ ಪರಿಹಾರ ಕೊಡಬೇಕು ಅಲ್ಲವೇ, ರಾಜ್ಯ ಸರ್ಕಾರ ನಮ್ಮನ್ನು ಶತ್ರುವಿನಂತೆ ನೋಡುತ್ತಿದೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ