https://youtube.com/shorts/DiU6l59Harw?si=ZuaOlVBTxzvWqxLP
newsics.com
ಬೆಂಗಳೂರು : ಕರ್ನಾಟಕದಲ್ಲಿ ಮರ್ಯಾದಾ ಹತ್ಯೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಇವ ನಮ್ಮವ, ಇವ ನಮ್ಮವ ಎಂಬ ಹೊಸ ಕಠಿಣ ಮಸೂದೆಗೆ ಒಪ್ಪಿಗೆ ನೀಡಿದೆ. ಈ ಮೂಲಕ ಜಾತಿ, ಅಂತರ್ಜಾತಿ ವಿವಾಹದ ಹೆಸರಿನಲ್ಲಿ ನಡೆಯುವ ಕೊಲೆಗಳಿಗೆ ಕಡಿವಾಣ ಹಾಕಲು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಲು ಸರ್ಕಾರ ಕಾನೂನು ರೂಪಿಸುತ್ತಿದೆ.
ಹೌದು ಇಂದು ವಿಧಾನಸಭಾದಲ್ಲಿ ಇವನ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಮಾಡಲಾಯಿತು. ಅಂತರ ಜಾತಿ ವಿವಾಹಕ್ಕೆ ಮಾನ್ಯತೆ ನೀಡುವ ವಿಧೇಯಕ ಇದಾಗಿದ್ದು ಹಲ್ಲೆ ದೌರ್ಜನ್ಯ ತಡೆಗಟ್ಟುವ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಂಡಿಸಿದರು.
ಈ ಮಸೂದೆ ಮೂಲಕ ವ್ಯಕ್ತಿಗಳಿಗೆ ತಮ್ಮ ಇಚ್ಛೆಯಂತೆ ವಿವಾಹವಾಗುವ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುವುದು, ಜಾತಿ ಆಧಾರಿತ ಅಪರಾಧಗಳನ್ನು ತಡೆಯುವುದು, ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಪ್ಪಿಸುವುದು ಮತ್ತು ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವ ವ್ಯವಸ್ಥೆ ರೂಪಿಸುವ ಉದ್ದೇಶವನ್ನು ಹೊಂದಲಾಗಿದೆ. ಜೊತೆಗೆ ಅಂತರ್ಜಾತಿ ವಿವಾಹಗಳನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು ಮಸೂದೆಯಲ್ಲಿ ನಿಯಮ ರೂಪಿಸಲಾಗಿದೆ.