Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!
ಕರ್ನಾಟಕಪ್ರಮುಖ

Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!

Share
1 Min Read
SHARE

 

newsics.com

ಕೋಲಾರ: ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ.

ಔಷಧ ಅಂಗಡಿ ಸ್ಥಳಾಂತರಕ್ಕೆ ಪರ‌ವಾನಗಿ ನೀಡಲು ಕೋಲಾರ ಸಹಾಯಕ ಔಷಧ ನಿಯಂತ್ರಕಿ ಜೆ.ಶ್ಯಾಮಲಾ ₹35 ಸಾವಿರ ಲಂಚ ಪಡೆಯುವಾಗ ಈ ನಾಟಕೀಯ ಘಟನೆ ನಡೆದಿದೆ.

ಔಷಧ ಅಂಗಡಿ ಬೇರೆಡೆಗೆ ಸ್ಥಳಾಂತರಕ್ಕೆ ಪರವಾನಗಿ ನೀಡಲು ಅಧಿಕಾರಿ ₹35 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಟೇಕಲ್‌ನಲ್ಲಿ ಮಂಗಳವಾರ ಕಾರಿನಲ್ಲಿಯೇ ಅಧಿಕಾರಿ ಲಂಚದ ಹಣ ಪಡೆಯುವಾಗ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆಯಂಟೊನಿ ಜಾನ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಮಹಿಳಾ ಅಧಿಕಾರಿಯು ಸಹಾಯಕ ಔಷಧ ನಿಯಂತ್ರಕರ ಕಚೇರಿಯ ‌’ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್‌ ಮತ್ತು ಚಾಲಕನೊಂದಿಗೆ ಕಾರಿನಲ್ಲಿ ಪರಾರಿಯಾದರು.

ಬಂಗಾರಪೇಟೆ ಕಡೆ ವೇಗವಾಗಿ ಹೊರಟ ಕಾರನ್ನು ಲೋಕಾಯುಕ್ತ ಪೊಲೀಸರು ಬೆನ್ನಟ್ಟಿದ್ದಾರೆ. ಸುಮಾರು 15 ಕಿ.ಮೀ. ದೂರ ಬೆನ್ನತ್ತಿದ ನಂತರ ಆರೋಪಿಗಳ ಕಾರಿಗೆ ತಮ್ಮ ಕಾರನ್ನು ಅಡ್ಡ ನಿಲ್ಲಿಸಿ ಹಿಡಿದಿದ್ದಾರೆ.

ಜೆ.ಶ್ಯಾಮಲಾ, ಶ್ರೀನಿವಾಸ್ ಮತ್ತು ಶ್ಯಾಮಲಾ ಅವರ ಕಾರಿನ ಚಾಲಕ ಮಹಾಂತೇಶ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

Gold, Silver ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ, ಆಭರಣಪ್ರಿಯರಿಗೆ ಖುಷಿಯೋ ಖುಷಿ

War News ಯುದ್ಧ ಮುಂದುವರಿಕೆ ತಂತ್ರದಿಂದಲೇ ಗೆಲ್ಲುತ್ತಿದೆಯಾ ಇರಾನ್? ಟ್ರಂಪ್ ಆತಂಕಗೊಂಡಿದ್ದೇಕೆ?

Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ

TAGGED:Drug controller arrested while absconding with bribemovie-style operation!
Share This Article
Facebook Twitter Copy Link Print
Previous Article Election news ಉಪ ಚುನಾವಣೆ: ಹಬ್ಬದಂದೇ ಬಾಗಲಕೋಟೆ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ
Next Article Vaastu info ಚಪ್ಪಲಿ ಹಾಕಿ ಅಡುಗೆಮನೆಗೆ ಹೋಗಬಾರದಾ? ಹೋದ್ರೆ ಏನಾಗುತ್ತೆ?

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?