https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಬೆಂಗಳೂರು : ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಿಚವ ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ದಾವಣೆಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಘೋಷಣೆ ವಿಚಾರವಾಗಿ ನಡೆದ ಸಭೆಯಲ್ಲಿ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.
ಚುನಾವಣೆ ಟಿಕೆಟ್ ನೀಡಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ಸಮುದಾಯದ ನಾಯಕರ ನಡುವೆ ದೊಡ್ಡ ಹಗ್ಗಜಗ್ಗಾಟವೇ ನಡೆದಿದೆ ಎಂದು ಹೇಳಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಲು ಮೌಲ್ವಿಗಳು,ಮುಸ್ಲಿಂ ಪ್ರಮುಖರು ಆಗ್ರಹಿಸಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹಮ್ಮದ್ ಹೇಳಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ.
ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸುತ್ತಿದ್ದಂತೆ ರಣದೀಪ್ ಸಿಂಗ್ ಸುರ್ಜೆವಾಲ ಉತ್ತರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಂದು ಸಮದಾಯ ನೆಚ್ಚಿಕೊಂಡಿಲ್ಲ. ಎಲ್ಲಾ ಸಮುದಾಯ ನಮ್ಮ ಜೊತೆಗಿದೆ. ಟಿಕೆಟ್ ಸೂಕ್ತ ಅಭ್ಯರ್ಥಿಗೆ ನೀಡಲಾಗುತ್ತದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.ಈ ಮೂಲಕ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಹೈಕಮಾಂಡ್ ಮುಂದೆ ಠುಸ್ ಆಗಿದೆ.
https://www.newsics.com/2026/03/21/the-prime-minister-shared-the-song-of-varanat-rajkumar/