newsics.com
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಆರ್ಸಿಬಿ ಪಂದ್ಯಕ್ಕೆ ಸಂಚಾರಿ ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ.ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.
ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ ಬಿಗಿ ಭದ್ರತೆ, ಎಐ ಕ್ಯಾಮರಾ ಕಣ್ಗಾವಲು, ಹೆಚ್ಚಿನ ಪ್ರವೇಶ ದ್ವಾರಗಳು ಹಾಗೂ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 28 ಹಾಗೂ ಏಪ್ರಿಲ್ 5ರಂದು ಕೆಳಗಿನ ರಸ್ತೆಗಳು ಸಂಪೂರ್ಣ ಅಥವಾ ಭಾಗಶಃ ಬಂದ್ ಆಗಲಿವೆ;
ಕ್ವೀನ್ಸ್ ರಸ್ತೆ ಸಂಪೂರ್ಣ ನಿರ್ಬಂಧ
ಬಾಳೆಕುಂದ್ರಿ ರಸ್ತೆ ಮತ್ತು ಸಿಟಿಓ ಜಂಕ್ಷನ್ ಬಂದ್
ಎಂ.ಜಿ ರಸ್ತೆ – ಅನಿಲ್ ಕುಂಬಳೆ ವೃತ್ತದಿಂದ ಜಂಕ್ಷನ್ ವರೆಗೆ ನಿಷೇಧ
ಲಿಂಕ್ ರಸ್ತೆ ಮೂಲಕ ಎಂ.ಜಿ ರಸ್ತೆ ಹಾಗೂ ಕಬ್ಬನ್ ರಸ್ತೆ ಸಂಪರ್ಕ ಬಂದ್
ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ ನಿಷೇಧ
ಸೆಂಟ್ರಲ್ ಸ್ಟ್ರೀಟ್ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ
ಲ್ಯಾವೆಲ್ಲೆ ರಸ್ತೆ – ಕ್ವೀನ್ ವೃತ್ತದಿಂದ ವಿಠ್ಠಲ್ ಮಲ್ಯ ರಸ್ತೆವರೆಗೆ ಬಂದ್
ಕಸ್ತೂರಬಾ ರಸ್ತೆ – ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಬಂದ್
ಸೇಂಟ್ ಮಾರ್ಕ್ಸ್ ರಸ್ತೆ – ಕ್ಯಾಶ್ ಫಾರ್ಮಸಿ ಜಂಕ್ಷನ್ನಿಂದ ಅನಿಲ್ ಕುಂಬಳೆ ವೃತ್ತದವರೆಗೆ ನಿಷೇಧ
ಕಬ್ಬನ್ ಪಾರ್ಕ್ ಒಳಗಿನ ಕಿಂಗ್ ರಸ್ತೆ ಹಾಗೂ ಪ್ರೆಸ್ ಕ್ಲಬ್ ಮುಂಭಾಗ ಬಂದ್
ಬಾಲಭವನ್ ಮುಂಭಾಗ ಫೌಂಟೇನ್ ರಸ್ತೆ ಪಾರ್ಕಿಂಗ್ ನಿಷೇಧ
ಪಂದ್ಯ ದಿನ ಹೆಚ್ಚಿನ ಜನಸಂದಣಿ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮೆಟ್ರೋ ಬಳಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಟ್ರಾಫಿಕ್ ಸಮಸ್ಯೆ ತಪ್ಪಿಸಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
https://www.newsics.com/2026/03/25/congress-leader-sonia-gandhi-admitted-to-hospital/