newsics.com
ಕಲಾವಿದರ ಸಂಘದಲ್ಲಿ ಇಂದು ಕನ್ನಡ ಚಿತ್ರರಂಗದ ಒಳಿತಿಗಾಗಿ ಹೋಮ-ಹವನ ಮಾಡಲಾಗಿದೆ. ಸ್ಯಾಂಡಲ್ವುಡ್ನ ಅಭಿವೃದ್ಧಿ, ಶಾಂತಿ, ನೆಮ್ಮದಿಗಾಗಿ ಗಣ ಹೋಮ, ಆಶ್ಲೇಷಾ ಬಲಿ, ಮೃತ್ಯುಂಜಯ ಹೋಮ, ಸರ್ಪಶಾಂತಿ, ನಾಗದೇವರ ವಿಶೇಷ ಪೂಜೆಯನ್ನು ನೆರವೇರಿಸಲಾಗಿದೆ.
ಸಂಘದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ನಾಗದರ್ಶನವಾಗಿದ್ದು, ಹಿರಿಯ ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರಿಗೆ ನಾಗದರ್ಶಕ ಮಹತ್ವದ ಪ್ರಶ್ನೆಯನ್ನು ಕೇಳಿದೆ. ನಿಮ್ಮಲ್ಲಿ ಒಗ್ಗಟ್ಟು ಉಂಟಾ.. ಇಷ್ಟು ಮಾಡಿದ್ರೂ ಎಲ್ಲರೂ ಒಟ್ಟಾಗಿ ಸೇರಿಲ್ಲ. ನನ್ನನ್ನು ಭಯ ಪಟ್ಟು ಪೂಜಿಸ್ಬೇಡಿ.. ಪ್ರೀತಿಯಿಂದ ಗೆಲ್ಲಿ ಎಂದು ಪ್ರಶ್ನಿಸಿದೆ.
ಈ ನಾಗದರ್ಶನದ ವೇಳೆ ಹಿರಿಯ ನಟಿ ಜ್ಯೋತಿ ಅವರ ಮೈ ಮೇಲೆ ದೇವರು ಬಂದ ಘಟನೆಯೂ ನಡೆದಿದೆ. ಕೂಡಲೇ ಇತರೆ ಕಲಾವಿದರು ನಟಿ ಜ್ಯೋತಿ ಅವರನ್ನು ಹಿಡಿದುಕೊಂಡಿದ್ದಾರೆ.