Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 23 ವರ್ಷಗಳಿಂದ ಆತ್ಮಹತ್ಯೆ ಮಾಡಿಕೊಂಡ ಮಗನಿಗೆ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!
ದೇಶಪ್ರಮುಖ

23 ವರ್ಷಗಳಿಂದ ಆತ್ಮಹತ್ಯೆ ಮಾಡಿಕೊಂಡ ಮಗನಿಗೆ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!

Share
2 Min Read
SHARE

ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲಾರದೆ ರಾಮ್ ಕೋಟಿ ಎಂಬ ಯುವಕ 23 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ, ಕಳೆದ 23 ವರ್ಷಗಳಿಂದ ತೆಲಂಗಾಣದಲ್ಲಿ (Telangana) ದಂಪತಿ ಸಾವನ್ನಪ್ಪಿದ ತಮ್ಮ ಮಗನ ಸಾವಿನ ದುಃಖವನ್ನು ಪ್ರಾರ್ಥನೆಗಳು, ಆಚರಣೆಗಳು ಮತ್ತು ಭಕ್ತಿಯಿಂದ ಆಚರಿಸುತ್ತಿದ್ದಾರೆ.
ಅಲ್ಲದೆ, ಪ್ರತಿ ವರ್ಷ ಆತ ಮೃತಪಟ್ಟ ದಿನದಂದು ಆತನ ಫೋಟೋಗೆ ಆತ ಪ್ರೀತಿಸಿದ ಯುವತಿಯ ಫೋಟೋದ ಜೊತೆಗೆ ಮದುವೆ ಮಾಡುತ್ತಿದ್ದಾರೆ. ದುಃಖವಾಗಿ ಪ್ರಾರಂಭವಾಗಿದ್ದ ಈ ಸಾವು ಈಗ ಇಡೀ ಗ್ರಾಮವನ್ನು ಒಟ್ಟುಗೂಡಿಸುವ ಸಂಪ್ರದಾಯವಾಗಿ ಬೆಳೆದಿದೆ.
ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ಲಾಲು ಮತ್ತು ಸುಕ್ಕಮ್ಮ 2003ರಲ್ಲಿ ಮೃತಪಟ್ಟ ತಮ್ಮ ಮಗ ರಾಮ್ ಕೋಟಿಗಾಗಿ ಪ್ರತಿ ವರ್ಷ ವಿವಾಹ ಸಮಾರಂಭವನ್ನು ನಡೆಸುತ್ತಿದ್ದಾರೆ. ರಾಮ್ ಪ್ರೀತಿಸಿದ ಹುಡುಗಿಯ ಕುಟುಂಬಸ್ಥರು ಅವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಮನನೊಂದು ರಾಮ್ ಕೋಟಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಕೆಲವೇ ದಿನಗಳಲ್ಲಿ ಅವರು ಪ್ರೀತಿಸಿದ ಯುವತಿ ಕೂಡ ಆತ್ಮಹತ್ಯೆ ಮಾಡಿಕೊಂಡಳು. ಇಬ್ಬರೂ ಪ್ರೇಮಿಗಳು ಇಹಲೋಕ ತ್ಯಜಿಸಿದರೂ ಅವರ ಕೊನೆಯಾಸೆಯನ್ನು ಈಡೇರಿಸಲು ರಾಮ್ ಅವರ ತಂದೆ-ತಾಯಿ ನಿರ್ಧರಿಸಿದರು.
ಹೀಗಾಗಿ, ಬದುಕಿದ್ದಾಗ ಅವರಿಬ್ಬರ ಮದುವೆ ಮಾಡಲಾಗದ ಕಾರಣದಿಂದ ಅವರ ಸಾವಿನ ದಿನದಂದು ರಾಮ್ ಅವರ ಮದುವೆ ಸಮಾರಂಭವನ್ನು ಏರ್ಪಡಿಸುತ್ತಿದ್ದಾರೆ. 23 ವರ್ಷಗಳಿಂದ ಅವರು ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಮೂಲಕ ತಮ್ಮ ಮಗನ ಸಾವಿನ ದಿನವನ್ನು ಅವರು ಸ್ಮರಣೀಯವಾಗಿಸುತ್ತಿದ್ದಾರೆ.
ಸುಕ್ಕಮ್ಮ ಅವರ ಪ್ರಕಾರ, ರಾಮ್ನ ಸಾವಿನ ನಂತರ ಆತ ಕನಸಿನಲ್ಲಿ ಕಾಣಿಸಿಕೊಂಡು ದೇವಸ್ಥಾನ ಕಟ್ಟಿಸಿ ಮದುವೆ ಮಾಡುವಂತೆ ಕೇಳಿಕೊಂಡರು. ಇದನ್ನು ನಂಬಿದ ದಂಪತಿಗಳು ತಮ್ಮ ಮನೆಯೊಳಗೆ ಒಂದು ಸಣ್ಣ ದೇವಾಲಯವನ್ನು ನಿರ್ಮಿಸಿದರು. ಅವರು ಅದರಲ್ಲಿ ಮಗ ರಾಮ್ ಮತ್ತು ಆತ ಪ್ರೀತಿಸಿದ ಹುಡುಗಿಯ ಪ್ರತಿಮೆಗಳನ್ನು ಸ್ಥಾಪಿಸಿ, ಅವರನ್ನು ಒಟ್ಟಿಗೆ ಇರಿಸಿದರು.

ಅಂದಿನಿಂದ, ಪ್ರತಿ ವರ್ಷ ರಾಮ ನವಮಿಯಂದು ಅವರಿಬ್ಬರಿಗೂ ಸಾಂಪ್ರದಾಯಿಕ ವಿವಾಹ ಸಮಾರಂಭವನ್ನು ನಡೆಸುತ್ತಿದ್ದಾರೆ. ಈ ಆಚರಣೆಯನ್ನು ನಿಜವಾದ ವಿವಾಹದಂತೆಯೇ ಸಂಪ್ರದಾಯ, ಪದ್ಧತಿಗಳೊಂದಿಗೆ ನಡೆಸಲಾಗುತ್ತದೆ. ಈ ಸಮಾರಂಭವನ್ನು ವೀಕ್ಷಿಸಲು ಮತ್ತು ಪ್ರಾರ್ಥನೆಗಳಲ್ಲಿ ಭಾಗವಹಿಸಲು ಗ್ರಾಮಸ್ಥರು, ಸಂಬಂಧಿಕರು ಮತ್ತು ಹತ್ತಿರದ ಪ್ರದೇಶಗಳ ಜನರು ಪ್ರತಿ ವರ್ಷ ಅವರ ಮನೆಗೆ ಆಗಮಿಸುತ್ತಾರೆ.

TAGGED:Parents have been marrying off their son who committed suicide for 23 years!
Share This Article
Facebook Twitter Copy Link Print
Previous Article ಎಸಿ, ಕೂಲರ್‌ ಇಲ್ಲದೆಯೂ ಮನೆಯನ್ನು ಕೂಲ್‌ ಆಗಿ ಇಡುವುದೇಗೆ?
Next Article ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?