https://youtube.com/shorts/w77Qj39UtDA?si=G-t7V0TrkmzYuWQ5
newsics.com
ಚಿಕ್ಕಬಳ್ಳಾಪುರ: ಕಂಟೇನರ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದು ನವ ವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
೫ ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ (28) ಹಾಗೂ ಆಕೆಯ ಸಂಬಂಧಿ ಪವನ್ ರೆಡ್ಡಿ (30) ಮೃತ ದುರ್ದೈವಿಗಳು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಆಂಧ್ರ ಮೂಲದವರಾದ ರಕ್ಷಿತಾ ಹಾಗೂ ರಾಜಶೇಖರ್ ರೆಡ್ಡಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ ಆಂಧ್ರಪ್ರದೇಶದ ಅನಂತಪುರಂನ ಅವಳಿಗಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೇರಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.