https://youtube.com/shorts/w77Qj39UtDA?si=G-t7V0TrkmzYuWQ5
newsics.com
ಚಿಕ್ಕಮಗಳೂರು: ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ.
ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.
ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.
ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.