https://youtube.com/shorts/w77Qj39UtDA?si=G-t7V0TrkmzYuWQ5
newsics.com
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಲಾಗಿದೆ. ಪಕ್ಷದ ಅಂತರಿಕ ವಲಯದಲ್ಲಿ ಇದು ಭಾರಿ ಚರ್ಚೆಗೆ ಕಾರಣವಾಗಿದೆ.
2023ರಿಂದ ಉಪನಾಯಕರಾಗಿದ್ದ ಚಡ್ಡಾ ಅವರ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರ ಕಳುಹಿಸಲಾಗಿದೆ.
ಮೇಲ್ಮನೆಯಲ್ಲಿ ಉಪನಾಯಕರನ್ನಾಗಿ ರಾಘವ್ ಛಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಮೇಲ್ಮನೆ ಉಪನಾಯಕರನ್ನಾಗಿ ನೇಮಿಸುವಂತೆ ಕೋರಿ ಆಮ್ ಆದ್ಮಿ ಪಕ್ಷ(ಎಎಪಿ) ಗುರುವಾರ ರಾಜ್ಯಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದೆ.
ರಾಘವ್ ಚಡ್ಡಾ ಇತ್ತೀಚಿನ ದಿನಗಳಲ್ಲಿ ತಮ್ಮ ಸಂಸದೀಯ ಭಾಷಣಗಳ ಬಗ್ಗೆ, ಪಿತೃತ್ವ ರಜೆ ಮುಂದೂಡಿಕೆಯಂತಹವುಗಳ ಬಗ್ಗೆ ಮತ್ತು ನಟಿ ಪರಿಣಿತಿ ಚೋಪ್ರಾ ಅವರೊಂದಿಗಿನ ಅವರ ನವಜಾತ ಶಿಶುವಿನಂತಹ ವೈಯಕ್ತಿಕ ಮೈಲಿಗಲ್ಲುಗಳ ಬಗ್ಗೆ ಆಗಾಗ್ಗೆ ಪೋಸ್ಟ್ ಮಾಡುತ್ತಿದ್ದಾರೆ.
https://www.newsics.com/2026/04/02/new-rules-imposed-for-tourists-visiting-the-land-of-coffee/