https://youtube.com/shorts/G0oN8U59OVY?si=rbIwZ4fR9fKtFNQ-
newsics.com
ನವದೆಹಲಿ: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು ಸಂಭವಿಸಿದ ಭೂಕಂಪದ ಪರಿಣಾಮವಾಗಿ ದೆಹಲಿ, ರಾಷ್ಟ್ರೀಯ ರಾಜಧಾನಿ ವಲಯ (NCR) ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ತೀವ್ರ ಕಂಪನದ ಅನುಭವವಾಗಿದೆ. ಇದರಿಂದಾಗಿ ಜನರಲ್ಲಿ ಕೆಲಕಾಲ ಭೀತಿ ಆವರಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರು ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 5.9 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ತಿಳಿಸಿದೆ.
ದೆಹಲಿ ಮಾತ್ರವಲ್ಲದೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಜಮ್ಮು-ಕಾಶ್ಮೀರದ ಹಲವೆಡೆ ಸರಣಿ ಕಂಪನಗಳು ದಾಖಲಾಗಿವೆ. ನೆರೆಯ ಪಾಕಿಸ್ತಾನದ ಲಾಹೋರ್ ಮತ್ತು ಇಸ್ಲಾಮಾಬಾದ್ನಲ್ಲೂ ಭೂಮಿ ನಡುಗಿದೆ.
https://www.newsics.com/2026/04/03/ksrtc-honoured-with-best-in-training-award/