newsics.com
ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ರಾತ್ರಿಯಾದರೆ ಸಾಕು ಕುಡುಕರು, ಪುಡಾರಿಗಳ ಶಿಳ್ಳೆ, ಕೇಕೆ ಕೇಳಿಬರ್ತಿದೆ. ಕೋಟಿ ಕೋಟಿ ರೂ. ವೆಚ್ಚ ಮಾಡಿ ಕಟ್ಟಿಸಿದ್ದ BBMP ಸಮುದಾಯಭವನ ಉದ್ಘಾಟನೆ ಭಾಗ್ಯ ಸಿಗದೇ ಗಬ್ಬೆದ್ದುನಾರುತ್ತಿದೆ.
ಜಯನಗರದಲ್ಲಿ ಕೋಟಿ ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿಯ ಸಮುದಾಯ ಭವನ ನಿರ್ಮಸಲಾಗಿದೆ. 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಕಟ್ಟಡ 2020ರಲ್ಲೇ ಉದ್ಘಾಟನೆಯಾಗಬೇಕಿತ್ತು, ಆದರೆ ಮಾಜಿ ಶಾಸಕಿ ಸೌಮ್ಯರೆಡ್ಡಿ ಹಾಗೂ ಹಾಲಿ ಶಾಸಕ ಸಿ.ಕೆ.ರಾಮಮೂರ್ತಿ ಜಿದ್ದಾಜಿದ್ದಿನಿಂದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ.
ಜಯನಗರ ಸುತ್ತಮುತ್ತಲಿನ ಜನರಿಗೆ ಕಾರ್ಯಕ್ರಮಗಳು, ಸಮಾರಂಭ ನಡೆಸೋಕೆ ಸಹಾಯವಾಗಲಿ ಅಂತಾ ಸೌಮ್ಯರೆಡ್ಡಿ ಶಾಸಕಿಯಾಗಿದ್ದ ವೇಳೆ ಈ ಕಟ್ಟಡದ ಕಾಮಗಾರಿ ನಡೆಸಲಾಗಿತ್ತು. ಬಿಬಿಎಂಪಿಯ ಅನುದಾನದಿಂದ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡ ಬಳಿಕ ಬಂದ ಶಾಸಕ ರಾಮಮೂರ್ತಿ ಅವಧಿಯಲ್ಲಿ ಕಾಮಗಾರಿ ಮುಗಿದ್ರೂ ರಾಜಕೀಯ ಒಳಮುನಿಸಿನಿಂದ ಕಟ್ಟಡ ಉದ್ಘಾಟನೆಯಾಗಿಲ್ಲ ಅಂತಾ ಸ್ಥಳೀಯರು ಆರೋಪಿಸ್ತಿದ್ದಾರೆ. ಸದ್ಯ ಕೋಟ್ಯಾಂತರ ರೂ ವೆಚ್ಚದ ಈ ಸಮುದಾಯ ಭವನ ಕಟ್ಟಡ, ಕುಡುಕರು, ಪುಂಡರ ತಾಣವಾಗಿದ್ದು, ಜನರ ತೆರಿಗೆ ಹಣ ವ್ಯರ್ಥ ಮಾಡಿರೋ ಪಾಲಿಕೆ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.