newsics.com
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.
ಮೃತ ಶ್ರೀನಿವಾಸ್ ಕಾರು ಚಾಲಕನಾಗಿದ್ದರು ಮತ್ತು ಅವರ ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಭಾರೀ ಪ್ರಮಾಣದಲ್ಲಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ