Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನೇಹಿತರ ಕುಚೇಷ್ಟೆಗೆ ಹೆತ್ತ ಮಗನನ್ನೇ ನದಿಗೆಸೆದ ತಂದೆ!
ಕರ್ನಾಟಕದೇಶಪ್ರಮುಖ

ಸ್ನೇಹಿತರ ಕುಚೇಷ್ಟೆಗೆ ಹೆತ್ತ ಮಗನನ್ನೇ ನದಿಗೆಸೆದ ತಂದೆ!

Share
2 Min Read
SHARE

newsics.com

ವಿಜಯಪುರ: ನಿನ್ನ ಮಗ ನಿನ್ನಂತಿಲ್ಲ ಎಂದು ಹೇಳುತ್ತಿದ್ದ ಸ್ನೇಹಿತರ ಕುಚೇಷ್ಟೆಯಿಂದ ರೋಸಿಹೋದ ವ್ಯಕ್ತಿಯೊಬ್ಬ ತನ್ನ ಸ್ವಂತ ಮಗನನ್ನೇ ಕೃಷ್ಣಾ ನದಿಗೆ ಎಸೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಬಂಧಿತ ಆರೋಪಿ.

ಮಲ್ಲಿಕಾರ್ಜುನ ಅರಕೇರಿ ತನ್ನ ಹೆತ್ತ ಮಗ ಸಿದ್ದಾರ್ಥ (6) ತನ್ನ ಮುಖದ ಹೋಲಿಕೆ ಹೊಂದಿಲ್ಲ ಎಂದು ಆತನ ಸ್ನೇಹಿತರು ಚೇಡಿಸುತ್ತಿದ್ದರು. ಈ ರೀತಿ ನಿತ್ಯ ಕುಚೇಷ್ಟೆ ಮಾಡುತ್ತಿದ್ದ ಸ್ನೇಹಿತರ ಮಾತಿಗೆ ರೋಸಿಹೋದ ಮಲ್ಲಿಕಾರ್ಜುನ ಅರಕೇರಿ, ತಾನು ಜನ್ಮನೀಡಿದ ಮುಗ್ಧ ಮಗುವನ್ನು ಹತ್ಯೆ ಮಾಡಲು ಸಂಚು ರೂಪಿಸಿ, ಮಾ. 16 ರಂದು ಮಗನನ್ನು ಸಿಂದಗಿಯ ಕೋಚಿಂಗ್ ಸೆಂಟರ್‌ಗೆ ಸೇರಿಸುವುದಾಗಿ ಹೇಳಿ, ಮಗುವನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರಾಡ್ ಬಳಿ ಕೃಷ್ಣಾ ನದಿಗೆ ಮಗುವನ್ನು ಎಸೆದು ವಾಪಸ್ ಊರಿಗೆ ಬಂದು, ಏನೂ ಆಗಿಲ್ಲವೆಂಬಂತೆ ನಟನೆ ಮಾಡಿದ್ದಾನೆ.

ಮಗನಿಗೆ ಕರೆ ಮಾಡಿ ಮಾತಾಡಿಸಿ ಎಂದು ತಾಯಿ ಭಾಗ್ಯಶ್ರೀ ಕೇಳಿದಾಗ ಯಾರೊ ಒಬ್ಬರಿಗೆ ಕರೆ ಮಾಡಿದ ಮಲ್ಲಿಕಾರ್ಜುನ, ಪೋನ್ ರಿಸೀವ್ ಮಾಡಿದ ವ್ಯಕ್ತಿ ಇಲ್ಲ ಮಗ ಮಾತನಾಡಲು ಒಪ್ಪುತ್ತಿಲ್ಲ, ಆತ ಆಟದಲ್ಲಿ ಬ್ಯುಸಿ ಇದ್ದಾನೆ ಎಂದು ಭಾಗ್ಯಶ್ರೀ ಮುಂದೆ ಹೇಳಿದ್ದಾರೆ. ಬಳಿಕ ಏ.1ರಂದು ಸಿದ್ದಾರ್ಥನ ಬರ್ತಡೇ ಇರುವ ಕಾರಣ ಮಾ. 31 ರಂದು ಮಗನಿಗೆ ಭೇಟಿ ಮಾಡಿಸುತ್ತೇನೆ ಎಂದು ಮಲ್ಲಿಕಾರ್ಜುನ ಹೆಂಡತಿಯನ್ನು ಕರೆದುಕೊಂಡು ಜಿಲ್ಲೆಯ ಸಿಂದಗಿಗೆ ಹೋಗಿ ಇಡೀ ದಿನ ಅಲ್ಲಿ ಸುತ್ತಾಡಿಸಿ ಕೊನೆಗೆ ಮಗನ ಭೇಟಿಯನ್ನೇ ಮಾಡಿಸಿಲ್ಲ. ಇದರಿಂದ ಆತಂಕಗೊಂಡು ಹಿರಿಯರನ್ನು ಸೇರಿಸಿ ಭಾಗ್ಯಶ್ರೀ  ಕೇಳಿದ್ದಾಳೆ. ಆಗಲೂ ಆತ ಏನನ್ನೂ ಹೇಳಿಲ್ಲ, ಕೊನೆಗೆ ಹೆಂಡತಿ ಮುಂದೆ ಮಗನನ್ನು ಮರೆತುಬಿಡು ಎಂದು ಹೇಳಿ ಮನೆಯಿಂದ ಹೋಗಿದ್ದಾನೆ.

ಮಗ ಹಾಗೂ ಪತಿ ಕಾಣೆಯಾದ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ದೂರನ್ನು ನೀಡಲಾಗಿದೆ. ಬಳಿಕ ಮಲಿಕಾರ್ಜುನನ್ನು ಕರೆತಂದ ಪೊಲೀಸರು ವಿಚಾರಣೆ ನಡೆಸಿದಾಗ ಮಗನನ್ನು ಕೃಷ್ಣಾ ನದಿಗೆ ಬೀಸಾಕಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮಲ್ಲಿಕಾರ್ಜುನ ಅರಕೇರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದವಳನ್ನು ಸುಟ್ಟ ಹಾಕಿದ ಕುಟುಂಬಸ್ಥರು.!

 

ಸರ್ಕಾರಿ ನೌಕರರೇ ವರ್ಗಾವಣೆಗೆ ಸಿದ್ದರಾಗಿ, ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ

TAGGED:#Vijayapur #father #son #river #krishna #andhra #karnataka
Share This Article
Facebook Twitter Copy Link Print
Previous Article 17 ವರ್ಷದ ಮಗಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!
Next Article ಈ ಯುವಕರು ತಮ್ಮ ರಕ್ತದಿಂದ್ಲೇ ಕಿಕ್ ಪಡೀತಾರೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?