newsics.com
ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್ಲೈನ್ ಬುಕಿಂಗ್, ಪ್ರತಿ 10 ಮಂದಿಗೆ ಒಬ್ಬ ಗೈಡ್ ಹಾಗೂ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯವಾಗಿದೆ. ಸುರಕ್ಷಿತ ಚಾರಣಕ್ಕೆ ಅಗತ್ಯ ಉಪಕರಣಗಳು ಮತ್ತು ಕ್ಯಾರಿಂಗ್ ಕೆಪಾಸಿಟಿ ನಿಯಂತ್ರಣವೂ ಜಾರಿಗೆ ತರಲಾಗಿದೆ.
ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.
ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
https://www.newsics.com/2026/04/17/manushi-chillars-hotness-is-making-young-people-crazy/