https://youtube.com/shorts/U8nUEfM6Yjc?si=6fq3EiIID4lUG0c4
newsics.com
ನೆಲಮಂಗಲ: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.
ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿ ಪ್ರಸಾದ್ ಶಿವದಾಸ್ ನಾಲ್ವಡೆ ಕಳೆದ ವಾರ ಬೆಂಗಳೂರುಗೆ ಆಗಮಿಸಿ, ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.
ಏಪ್ರಿಲ್ 12ರಂದು ಗುಣಿ ಅಗ್ರಹಾರ ಪ್ರದೇಶದಲ್ಲಿದ್ದ ವೇಳೆ ಅವರಿಗೆ ಬೆದರಿಕೆ ಕರೆ ಬಂದಿದ್ದರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಲಾಗಿದೆ.