ಮಂಡ್ಯ : 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಭಕ್ತರು ರಕೆ ತೀರಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಕೋಟೆ ಮಾಳ ಬೀದಿಯಲ್ಲಿನ ಬನ್ನಾರಮ್ಮ ದೇವಸ್ಥಾನದಲ್ಲಿ ನಡೆದಿದೆ.
ಕಳೆದ 27 ವರ್ಷದಿಂದ ವಾಣಿಯಾರ್ ಶ್ರೀಬನ್ನಾರಿ ಮಾರಮ್ಮ ನವರ ಭಕ್ತ ಮಂಡಳಿಯಿಂದ ಶ್ರೀ ಬನ್ನಾರಿ ಮಾರಮ್ಮನ ಕರಗ ಮಹೋತ್ಸವ ನಡೆಸಲಾಗುತ್ತಿದೆ. ವಿವಿಧೆಡೆಯ ಭಕ್ತರು ದೇವಿಯಲ್ಲಿ ಹರಿಕೆ ಮಾಡಿಕೊಂಡು ಬೇವಿನ ಸೊಪ್ಪು ಹಿಡಿದು ಬಾಯಿ ಬೀಗ ಚುಚ್ಚಿಸಿ ಹರಿಕೆ ತೀರಿಸಲು ಬಣ್ಣಾರಿ ಮಾರಿಯಮ್ಮನ ಕರಗ ಮಹೋತ್ಸವದ ಅಂಗವಾಗಿ 18 ಅಡಿ ಉದ್ದದ ಸರಳಿನ ಬಾಯಿಬೀಗ ಹಾಕಿಸಿಕೊಂಡಿದ್ದರು.
ಸೋಮವಾರ ರಾತ್ರಿ ಬಲಮುರಿ ಕಾವೇರಿ ನದಿಯಲ್ಲಿ ದೇವರ ಮಡಿ ಮಾಡಿ ಕರಗ ಮಹೋತ್ಸವ ಮೆರವಣಿಗೆ ನಡೆಸಲಾಯಿತು. ಮಂಗಳವಾರ ಬೆಳಗ್ಗೆ ಗ್ರಾಮದ ಮುಂಭಾಗದ ಆಂಜನೇಯ ಹಾಗೂ ಮಾರಮ್ಮನ ದೇವಾಲಯದಲ್ಲಿ ವಿವಿಧ ಪೂಜೆ ಸಲ್ಲಿಸಿ, ಹರಿಕೆ ಹೊತ್ತ ಭಕ್ತರಿಗೆ ಬಾಯಿ ಬೀಗ ಹಾಕಿಸಿಕೊಂಡರು.