newsics.com
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಪ್ರಾಸಿಕ್ಯೂಷನ್ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರ ನಡೆದಿದೆ. ನನ್ನ ಪರವಾಗಿ ಸಚಿವರು, ಶಾಸಕರು ಇದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವುದನ್ನು ನಾನು ನಿರೀಕ್ಷೆ ಮಾಡಿದ್ದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿವೆ. ಇದನ್ನು ಧಿಕ್ಕರಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.
ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ, ನಾನ್ಯಾಕೆ ರಾಜೀನಾಮೆ ಕೊಡಲಿ- ಸಿಎಂ