newsics.com
ಬೆಂಗಳೂರು : ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
https://youtube.com/shorts/yrC3ODyMmjo?si=ybubL3Ee_pXg1sLS
ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.
ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಮಗು ಹಾಗು ತಾಯಿಗೆ ಮಾಸಿಕ 75,000 ರೂಪಾಯಿ ಪಾವತಿಸಲು, ಮುಂದಿನ ಆದೇಶದವರೆಗೂ ತಿಂಗಳಿಗೆ 75,000 ಪಾವತಿಸಲು ಅರ್ಜಿದಾರ ಕೃಷ್ಣ ಜೆ. ರಾವ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದಂತೆ ಸೂಚನೆ ನೀಡಿತು. ಷರತ್ತಿನ ಮೇರೆಗೆ ಕೃಷ್ಣ ಜಯರಾ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
https://www.newsics.com/2026/04/24/unknown-body-found-in-bag-people-shocked/