newsics.com/ನ್ಯೂಸಿಕ್ಸ್
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ನಡೆಯಲಿದೆ. ಹೈಕೋರ್ಟ್ ಆದೇಶದಂತೆ ಸಿದ್ಧತೆ ಪೂರ್ಣಗೊಂಡಿದ್ದು, 279 ತಿರಸ್ಕೃತ ಮತಗಳ ಮರುಪರಿಶೀಲನೆ ಐಡಿಎಸ್ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ.
ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 2,811 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರುಎಣಿಕೆಗೆ ಮನವಿ ಮಾಡಿದ್ದರಾದರೂ, ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರಾಗಿ ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಆದೇಶದಂತೆ ಇದೀಗ ಅಂಚೆ ಮತಗಳ ಮರುಎಣಿಕೆಗೆ ಸಿದ್ಧತೆ ನಡೆಸಲಾಗ್ತಿದೆ.