newsics.com/ನ್ಯೂಸಿಕ್ಸ್
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿ ಶಾಕ್ ನೀಡಿದ್ದಾಳೆ. ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
ಏಪ್ರಿಲ್ 26ರಂದು ಗ್ರಾಮದ ಯುವತಿಯ ನಿಶ್ಚಿತಾರ್ಥ ನಿಗದಿಯಾಗಿತ್ತು. ಕುಟುಂಬದರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಶನಿವಾರ ರಾತ್ರಿ ನರೇಗಲ್ ಗ್ರಾಮದ ಇಬ್ರಾಹಿಂ ಎಂಬ ಯುವಕನೊಂದಿಗೆ ಯುವತಿ ಹೋಗಿದ್ದಾಳೆ.
ಗ್ರಾಮದ 24 ವರ್ಷದ ಬಿ.ಕಾಂ ಪದವೀಧರೆ ಶಂಕ್ರಮ್ಮ ಕೆರಿಮತ್ತಿಹಳ್ಳಿ ನಾಪತ್ತೆಯಾದ ಯುವತಿ. ಶಂಕ್ರಮ್ಮನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮೇ 11ಕ್ಕೆ ಮದುವೆಯೂ ನಿಶ್ಚಯವಾಗಿತ್ತು. ನಿಶ್ಚಿತಾರ್ಥ ನಡೆದ ರಾತ್ರಿ ಭಾವಿ ಪತಿಯೊಂದಿಗೆ ಫೋನ್ನಲ್ಲಿ ಮಾತನಾಡಿದ್ದ ಯುವತಿ, ತಡರಾತ್ರಿ ಮನೆಯ ಹಿಂಬದಿಯ ಬಾಗಿಲಿನಿಂದ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬ ಯುವಕ ಈಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಇದು ಲವ್ ಜಿಹಾದ್ ಪ್ರಯತ್ನ ಎಂದು ಕುಟುಂಬಸ್ಥರು ಹಾಗೂ ಹಿಂದೂಪರ ಸಂಘಟನೆಗಳು ಗಂಭೀರವಾಗಿ ಆರೋಪಿಸಿವೆ.
https://www.newsics.com/2026/04/26/inspector-assaults-tea-shop-worker/