newsics.com/ನ್ಯೂಸಿಕ್ಸ್
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
https://youtube.com/shorts/1MGAmJmhYq0?si=nMc-nPA4I0KAHwKo
ಅಸ್ಸಾಂನಲ್ಲಿ ಬಿಜೆಪಿ, ಕಾಂಗ್ರೆಸ್, ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ- ಬಿಜೆಪಿ ಮೈತ್ರಿಕೂಟ, ಡಿಎಂಕೆ- ಕಾಂಗ್ರೆಸ್ ಮೈತ್ರಿಕೂಟ ಮತ್ತು ವಿಜಯ್ ಅವರ ಟಿವಿಕೆ, ಕೇರಳದಲ್ಲಿ ಯುಡಿಎಫ್, ಎಲ್.ಡಿ.ಎಫ್., ಪಶ್ಚಿಮ ಬಂಗಾಳದಲ್ಲಿ ಟಿಎಂಸಿ- ಬಿಜೆಪಿ ಹಾಗೂ ಪುದುಚೇರಿಯಲ್ಲಿ ಎನ್.ಡಿ.ಎ. ಮತ್ತು ಇಂಡಿಯಾ ಮೈತ್ರಿಕೂಟಗಳ ನಡುವೆ ಹಣಾಹಣಿ ಇದೆ. ಚುನಾವಣಾ ಸಮೀಕ್ಷೆಗಳಲ್ಲಿ ಅಸ್ಸಾಂನಲ್ಲಿ ಬಿಜೆಪಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಹೇಳಲಾಗಿದ್ದು, ಮಧ್ಯಾಹದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.