newsics.com
ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.
ಐದು ದಿನ ಅಂದರೆ ಆಗಸ್ಟ್ 20, 23, 30 ಮತ್ತು ಸೆಪ್ಟೆಂಬರ್ 6, 11 ರಂದು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.
ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಕೆಲವು ದಿನ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
5 ದಿನ ರೈಲು ಸೇವೆ ಸ್ಥಗಿತ
- ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.
ಸಮಯ ಬದಲಾವಣೆ: ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:
- ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ.
- ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗೆ, 5.00 ಗಂಟೆ ಬದಲಾಗಿ 06. ಗಂಟೆಗೆ ಪ್ರಾರಂಭವಾಗಲಿದೆ.
ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ
- ಆಗಸ್ಟ್ 24ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಗಂಟೆ ಪ್ರಾರಂಭವಾಗಲಿದೆ.
- ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05.00 ಗಂಟೆಗೆ ಪ್ರಾರಂಭವಾಗಲಿದೆ.
https://x.com/OfficialBMRCL/status/1825459185930146023?t=Jf8xudCLZIxQuAB9ueRK7w&s=19
ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಜಸ್ಟ್ 30 ಸಾವಿರಕ್ಕೆ ಸಿಗುತ್ತೆ 10 ಗ್ರಾಂ ಬಂಗಾರ!