newsics.com/ನ್ಯೂಸಿಕ್ಸ್
ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವಿನತ್ತ ಮುನ್ನಡೆಯುತ್ತಿದೆ. ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರದ ಕನಸು ಕಾಣುತ್ತಿದ್ದ ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಎದುರಾಗಿದೆ.
https://youtube.com/shorts/1MGAmJmhYq0?si=nMc-nPA4I0KAHwKo
ಈ ಭಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟ ಮತ ಎಣಿಕೆಯಲ್ಲಿ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸುವತ್ತ ಮುನ್ನುಗುತ್ತಿದೆ.
ಇತ್ತ ಜನಾದೇಶ ಸ್ಪಷ್ಟವಾಗುತ್ತಿದ್ದಂತೆ ಕೇರಳದ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಾಮಾಚರಣೆ ಪ್ರಾರಂಭವಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ, ಕೆ.ಸಿ. ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್ ಮತ್ತು ಶಶಿ ತರೂರ್ ಮೊದಲಾದವರು ಕಾರ್ಯಕರ್ತರೊಂದಿಗೆ ಸಂತೋಷವನ್ನು ಹಂಚಿಕೊಂಡಿದ್ದಾರೆ.