newsics.com
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೊಲ್ಕತ್ತಾದಲ್ಲಿ ನಡೆದ ರೇಪ್ ಬಗ್ಗೆ ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಬಿಡುಗಡೆಯ ತಯಾರಿಯಲ್ಲಿರುವ ಅವರು ಅತ್ಯಾಚಾರದ ಕೇಸ್ ಗಳ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.
ನಮ್ಮದು ರಾಮಜನ್ಮ ಭೂಮಿ. ಕೆಲವರು ಮಾಡುವ ಕೃತ್ಯದಿಂದ ನಮ್ಮ ಭಾರತಕ್ಕೆ ಕೆಟ್ಟ ಹೆಸರು. ಹೆಣ್ಮಕ್ಕಳಿಗೆ ಮಾತ್ರ ಹೀಗಿರಿ, ಹಾಗಿರಿ, ಹೀಗೆಯೇ ಬಟ್ಟೆ ಹಾಕಬೇಕು, ಇದನ್ನೇ ಮಾಡಬೇಕು, ಅದನ್ನೇ ಮಾಡಬೇಕು ಅಂತ ಹೇಳುವುದಕ್ಕಿಂತ ಒಬ್ಬ ಹುಡುಗನನ್ನು ಬೆಳೆಸುವಾಗ ಮೂರು ವಿಷಯ ಕಡ್ಡಾಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಹೇಳಿಕೊಡಬೇಕು. ಹೆಣ್ಮಕ್ಕಳನ್ನು ಹೇಗೆ ರಕ್ಷಿಸಬೇಕು, ಹೇಗೆ ಬೆಂಬಲಿಸಬೇಕು, ಹೇಗೆ ಗೌರವಿಸಬೇಕು ಎಂಬುದನ್ನು ಹೇಳಿಕೊಡಲೇಬೇಕು’ ಎಂದಿದ್ದಾರೆ.