newsics.com/ನ್ಯೂಸಿಕ್ಸ್
ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಭಾರೀ ಸೋಲನುಭವಿಸಿದ್ದು, ಸ್ವತಃ ಮಮತಾ ಬ್ಯಾನರ್ಜಿ ಅವರೇ ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ.
ಸೋಮವಾರ ಬೆಳಗ್ಗೆಯಿಂದ ಮುನ್ನಡೆಯಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ 16 ಮತ್ತು 17ನೇ ಸುತ್ತಿನ ಮತ ಎಣಿಕೆಯ ವೇಳೆಗೆ ಹಿನ್ನಡೆಯಾಗಿದೆ.
17ನೇ ಸುತ್ತಿನ ಅಂತ್ಯಕ್ಕೆ ಸುವೇಂದು ಅಧಿಕಾರಿ ಅವರು ಸುಮಾರು 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮಮತಾ ಬ್ಯಾನರ್ಜಿ ಅವರಿಗಿಂತ ಮುಂದಿದ್ದಾರೆ.16ನೇ ಸುತ್ತಿನ ಅಂತ್ಯಕ್ಕೆ ಈ ಅಂತರ ಕೇವಲ 500 ಮತಗಳಷ್ಟಿತ್ತು, ಆದರೆ ನಂತರದ ಸುತ್ತಿನಲ್ಲಿ ಸುವೇಂದು ತಮ್ಮ ಮುನ್ನಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದರು. ಅಂತಿಮವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ನಾಗಾಲೋಟ
ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸಂಕಷ್ಟ ಎದುರಾಗಿರುವಂತೆಯೇ, ರಾಜ್ಯಾದ್ಯಂತ ಬಿಜೆಪಿ ಭರ್ಜರಿ ಯಶಸ್ಸಿನತ್ತ ಮುನ್ನಡೆಯುತ್ತಿದೆ.ಒಟ್ಟು 294 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ ಬಹುಮತದ ಗಡಿಯಾದ 148ನ್ನು ದಾಟಿ 200ರ ಸಮೀಪಕ್ಕೆ ತಲುಪಿದೆ.15 ವರ್ಷಗಳ ಟಿಎಂಸಿ ಆಡಳಿತವನ್ನು ಅಂತ್ಯಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ.
ಮಮತಾ ಬ್ಯಾನರ್ಜಿ ಆರೋಪ
ಈ ಮಧ್ಯೆ, ಭವಾನಿಪುರದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.ಸ್ಟ್ರಾಂಗ್ ರೂಮ್ಗೆ ಪ್ರವೇಶಿಸಲು ತಮಗೆ ಅವಕಾಶ ನೀಡುತ್ತಿಲ್ಲ ಮತ್ತು ಮತ ಎಣಿಕೆಯನ್ನು ಉದ್ದೇಶಪೂರ್ವಕವಾಗಿ ನಿಧಾನಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.
ಭವಾನಿಪುರವು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಎನ್ನಲಾಗಿದ್ದು, ಇಲ್ಲಿನ ಅಂತಿಮ ಫಲಿತಾಂಶವು ಬಂಗಾಳ ರಾಜಕಾರಣದ ದಿಕ್ಕನ್ನೇ ಬದಲಿಸಿದಂತೆ ಆಗಿದೆ.
PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ
Kerala cm resigned ಪಿಣರಾಯಿ ವಿಜಯನ್ಗೆ ಭಾರೀ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!