newsics.com/ನ್ಯೂಸಿಕ್ಸ್
ಕೋಲ್ಕತ್ತಾ: ಆರ್ಜಿ ಕರ್ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್ ಅವರು ಬಂಗಾಳದ ಪಾಣಿಹಟಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
https://youtube.com/shorts/iatQVbaFb3g?si=I11csgvje-MFvvAP
ಉತ್ತರ 24 ಪರಗಣದಲ್ಲಿರುವ ಪಾಣಿಹಟಿ ವಿಧಾನಸಭಾ ಸ್ಥಾನವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅತ್ಯಂತ ಗಮನ ಸೆಳೆದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಐದು ಬಾರಿ ಹಾಲಿ ಶಾಸಕರಾಗಿರುವ ತೀರ್ಥಂಕರ ಘೋಷ್ ಅವರ ಪುತ್ರ ಟಿಎಂಸಿ ಅಭ್ಯರ್ಥಿ ತೀರ್ಥಂಕರ ಘೋಷ್ ವಿರುದ್ಧ ರತ್ನಾ ದೇಬನಾಥ್ ಜಯಗಳಿಸಿದ್ದಾರೆ.
ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ವೈದ್ಯೆಯ ಮೇಲೆ ಅ*ತ್ಯಾಚಾರ ನಡೆಸಿ, ಅತ್ಯಂತ ಕ್ರೂರವಾಗಿ ಹ*ತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಮತಾ ಬ್ಯಾನರ್ಜಿ ಅವರ ಗಮನಕ್ಕೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ತಂದರೂ ಅವರು ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ, ಬದಲಿಗೆ ರೇಪಿ*ಸ್ಟ್ಗೆ ಆಶ್ರಯ ನೀಡುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳೂ ಕೇಳಿಬಂದಿದ್ದವು. ಆದರೆ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂಸಾಚಾರ ರೂಪವನ್ನು ಪಡೆದಾಗ, ಕೊನೆಗೂ ಮಣಿದ ಪೊಲೀಸರು ಇದನ್ನು ಸಿಬಿಐ ತನಿಖೆಗೆ ವಹಿಸಿದ್ದರು. ವಿಚಾರಣಾ ನ್ಯಾಯಾಲಯವು ಅಪರಾಧಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈತನಿಗೆ ಗಲ್ಲುಶಿಕ್ಷೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ತಮ್ಮ ಮಗಳಿಗೆ ಆಗಿರುವ ಅನ್ಯಾಯ ಪಶ್ಚಿಮ ಬಂಗಾಳದಲ್ಲಿ ಯಾರ ಮಗಳಿಗೂ ಆಗಬಾರದು. ಅವರ ಸುರಕ್ಷತೆಯೇ ಮುಖ್ಯ ಎನ್ನುವ ಕಾರಣಕ್ಕೆ ಹಾಗೂ ಮುಖ್ಯಮಂತ್ರಿಯಾಗಿದ್ದ ಮಮತಾ ಅವರು ಈ ಪ್ರಕರಣದ ಬಗ್ಗೆ ತೋರಿಸಿದ್ದ ನಿರ್ಲಕ್ಷ್ಯಗೆ ಸಿಡಿದೆದಿದ್ದ, ಸಂತ್ರಸ್ತೆಯ ಅಮ್ಮ, ರತ್ನಾ ದೇಬನಾಥ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರವೇಶ ಮಾಡಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.
ರತ್ನ ದೇಬನಾಥ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಪಶ್ಚಿಮ ಬಂಗಾಳದ ಪಾನಿಹಟಿ ವಿಧಾನಸಭಾ ಕ್ಷೇತ್ರದಿಂದ 2026ರ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಪಾನಿಹಟಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ತಮ್ಮ ಉದ್ದೇಶ ಮಗಳಿಗೆ ನ್ಯಾಯ ದೊರಕಿಸಿಕೊಡುವುದು ಮತ್ತು ಮಹಿಳೆಯರ ಸುರಕ್ಷತೆಗಾಗಿ ಹೋರಾಡುವುದು ಎಂದಿದ್ದಾರೆ.