newsics.com/ನ್ಯೂಸಿಕ್ಸ್
ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಶ್ರೀಗಳು ಹಾಗೂ ಪಂಚಮಸಾಲಿ ಟ್ರಸ್ಟ್ ಸದಸ್ಯರ ನಡುವಿನ ಸಂಘರ್ಷ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪಂಚಮಸಾಲಿ ಮಠದ ಬಳಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅಲ್ಲದೇ ವಚನಾಅಂದ ಶ್ರೀಗಳಿಗೂ ನೋಟಿಸ್ ನೀಡಿದ್ದಾರೆ.
https://youtube.com/shorts/iatQVbaFb3g?si=I11csgvje-MFvvAP
ಪಂಚಮಸಾಲಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ, ಪ್ರವಚನ ಮಾಡಬಹುದು. ಆದರೆ ಮಠದಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸರು ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.
ಮಠದಲ್ಲಿ ಮಾರ್ಚ್ 10 ರಿಂದ ಎರಡು ಕಡೆ ಬೆಂಬಲಿಗರು ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಿದ್ದರು. ಇದರಿಂದ ಗಲಾಟೆ, ಪ್ರಚೋದನಾಕಾರಿ ಹೇಳಿಕೆಗಳು ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಹದಗೆಡುತ್ತಿದೆ. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುತ್ತಿದೆ. ಪೊಲಿಸ್ ಇಲಕಹೆ ಪದೇ ಪದೇ ಭದ್ರತೆ ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪಂಚಾಸಾಲಿ ಪೀಠದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಥಿ ನಡೆಸುವಂತಿಲ್ಲ. ಮಠದಲ್ಲಿ ಮೇ 1 ರಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.