newsics.com/ನ್ಯೂಸಿಕ್ಸ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
https://youtube.com/shorts/iatQVbaFb3g?si=I11csgvje-MFvvAP
ಮೇ 5 ರಿಂದ ಮೇ 6 (ಬೆಳಿಗ್ಗೆ 8:30ರವರೆಗೆ): ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಕೇಂದ್ರ ಭಾಗಗಳಲ್ಲಿ ಹಗುರ ಮಳೆ ಆಗುವ ನಿರೀಕ್ಷೆಯಿದೆ.
ಈ ಅವಧಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದು, ನಗರದಾದ್ಯಂತ ಅತೀ ಹಗುರ ಮಳೆ ಬೀಳುವ ಸಾಧ್ಯತೆಯಿದೆ.
ಮೂರನೇ ದಿನ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಉತ್ತರದ ಕೆಲವು ಭಾಗಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆಯಿದೆ.