Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ
ಪ್ರಮುಖಮನರಂಜನೆ

ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸಮ್ಮಿಶ್ರ ಸರ್ಕಾರ ರಚಿಸಲು ಸಜ್ಜಾಗಿದೆ. ವಿಸಿಕೆ, ಕಾಂಗ್ರೆಸ್, ಮತ್ತು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಸಚಿವ ಸಂಪುಟ ಹಂಚಿಕೆಯ ಸೂತ್ರದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದ್ದಾರೆ.

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಸಮ್ಮಿಶ್ರ ಸರ್ಕಾರ’ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರು ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಬಹುಮತ ಗಳಿಸಿದ್ದು, ಮೈತ್ರಿ ಧರ್ಮದಂತೆ ಮಿತ್ರಪಕ್ಷಗಳಿಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ವಿಜಯ್ ಅವರ ಸಚಿವ ಸಂಪುಟದಲ್ಲಿ ಮಿತ್ರಪಕ್ಷಗಳಿಗೆ ಈ ಕೆಳಗಿನಂತೆ ಸ್ಥಾನಗಳನ್ನು ಹಂಚಿಕೆ ಮಾಡಲು ಪ್ರಾಥಮಿಕವಾಗಿ ನಿರ್ಧರಿಸಲಾಗಿದೆ ತೋಳ್ ತಿರುಮಾವಳವನ್ ನೇತೃತ್ವದ ವಿಡುತಲೈ ಚಿರುತ್ತೈಗಳ್ ಕಚ್ಚಿ (ವಿಸಿಕೆ) ಪಕ್ಷಕ್ಕೆ ಒಂದು ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಸ್ವತಃ ತಿರುಮಾವಳವನ್ ಅವರೇ ಸಂಪುಟ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೈತ್ರಿಯಲ್ಲಿ ಭಾಗಿಯಾಗಿರುವ ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ಮತ್ತು ಸಿಪಿಐ (ಮಾರ್ಕ್ಸ್‌ವಾದಿ) ಪಕ್ಷಗಳಿಗೆ ಒಟ್ಟು ಎರಡು ಸಚಿವ ಸ್ಥಾನಗಳನ್ನು ನೀಡಲು ತೀರ್ಮಾನಿಸಲಾಗಿದೆ. ಇನ್ನು ಈ ಮೊದಲೇ ಬೆಂಬಲ ನೀಡಿದ್ದ ಕಾಂಗ್ರೆಸ್‌ ಪಕ್ಷ 2 ಸಚಿವ ಸ್ಥಾನವನ್ನು ಪಡೆಯಲಿದೆ.

ದಶಕಗಳಿಂದ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯ ಏಕಪಕ್ಷೀಯ ಆಡಳಿತಕ್ಕೆ ಒಗ್ಗಿಕೊಂಡಿದ್ದ ತಮಿಳುನಾಡಿಗೆ ಇದು ಹೊಸ ಅನುಭವ. ಮುಖ್ಯಮಂತ್ರಿ ಗದ್ದುಗೆಯನ್ನು ವಿಜಯ್ ಅಲಂಕರಿಸಲಿದ್ದು, ಸಣ್ಣ ಪಕ್ಷಗಳ ಶಾಸಕರು ಸಚಿವರಾಗಿ ಆಡಳಿತದಲ್ಲಿ ಭಾಗಿಯಾಗಲಿದ್ದಾರೆ. ಇದು ರಾಜ್ಯದ ರಾಜಕೀಯ ಸಮೀಕರಣದಲ್ಲಿ ದೊಡ್ಡ ಬದಲಾವಣೆಗೆ ನಾಂದಿ ಹಾಡಲಿದೆ.

ಕಳೆದ ಮೂರು ದಿನಗಳಲ್ಲಿ ವಿಜಯ್‌ ಮೂರನೇ ಬಾರಿಗೆ ರಾಜ್ಯಪಾಲ ಆರ್ಲೇಕರ್‌ ಅವರನ್ನು ಭೇಟಿಯಾಗಲಿದ್ದಾರೆ. ವಿಸಿಕೆ ಮುಖ್ಯಸ್ಥರ ಜೊತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ ಬೆನ್ನಲ್ಲಿಯೇ ವಿಸಿಕೆ ಅಧಿಕೃತವಾಗಿ ತನ್ನ ಬೆಂಬಲವನ್ನು ಟಿವಿಕೆಗೆ ಸೂಚಿಸಿದೆ. ವಿಜಯ್ ಅವರು ಈಗಾಗಲೇ ಬಹುಮತದ ಸಂಖ್ಯಾಬಲವನ್ನು ಕ್ರೋಢೀಕರಿಸಿದ್ದು, ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ ಮೈತ್ರಿ ಸರ್ಕಾರದ ಹಕ್ಕು ಮಂಡಿಸಲಿದ್ದಾರೆ. ಮೈತ್ರಿ ಪಕ್ಷಗಳ ನಡುವಿನ ಅಧಿಕಾರ ಹಂಚಿಕೆಯ ಈ ಸೂತ್ರವು ಸರ್ಕಾರದ ಸ್ಥಿರತೆಗೆ ನಾಂದಿ ಹಾಡಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

TAGGED:Thalaparthi Sarathi to form first coalition government in Tamil Nadu history:
Share This Article
Facebook Twitter Copy Link Print
Previous Article ಗುಣಮುಖಳಾಗ್ತಾಳೆಂದು ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು
Next Article ಸ್ಟೈಲಿಶ್ ಆಗಿ ಹೇರ್ ಕಟ್ ಮಾಡಿಸಿಕೊಂಡ ಕೋತಿ!

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?