newsics.com/ನ್ಯೂಸಿಕ್ಸ್
ಬಳ್ಳಾರಿ: ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ ಮಾಡಿದ್ದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವೈಯಕ್ತಿಕ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಿಂದ ಎಸ್ಪಿಯ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ದೇವರಾಜ್ ಅವರನ್ನು ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.
ಮಡಕೇರಿಯಿಂದ ಆಂಧ್ರಪ್ರದೇಶಕ್ಕೆ ಎರಡು ಲಾರಿಗಳಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ವೇಳೆ ಶರಭಯ್ಯ ಎಂಬುವವರ ಲಾರಿಗಳನ್ನು ಅಡ್ಡಗಟ್ಟಿದ ಗನ್ ಮ್ಯಾನ್ ದೇವರಾಜ್ ಮತ್ತು ಆತನ ಸಹಚರರು ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳೆಂದು ಹೇಳಿದ್ದಾರೆ. ಬಳಿಕ ಲಾರಿಗಳನ್ನು ಜಪ್ತಿ ಮಾಡಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ ಈ ತಂಡವು ಪ್ರಕರಣ ಮುಚ್ಚಿಹಾಕಲು 5 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದರು. ಅಂತಿಮವಾಗಿ 3 ಲಕ್ಷ ರೂಪಾಯಿಗಳನ್ನು ಸುಲಿಗೆ ಮಾಡಿದ್ದರು ಎನ್ನುವ ರೋಪ ಕೇಳಿಬಂದಿದೆ.
ಆರೋಪಿಗಳು ತಮ್ಮನ್ನು “ಎಸ್ಪಿ ಸ್ಕ್ವಾಡ್” ಸದಸ್ಯರೆಂದು ಪರಿಚಯಿಸಿಕೊಂಡಿದ್ದು, ವಾಹನಗಳನ್ನು ವಶಪಡಿಸಿಕೊಳ್ಳುವುದಾಗಿ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆರೋಪಿಗಳು ಆರಂಭದಲ್ಲಿ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ತದನಂತರ ಸುಮಾರು 3 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದರು.
ತನಿಖೆಯಲ್ಲಿ ದೇವರಾಜ್ ಹಣಕ್ಕಾಗಿ ಬೇಡಿಕೆ ಇಟ್ಟು, ವಸೂಲಿ ಮಾಡಿದ ಪ್ರಮುಖ ವ್ಯಕ್ತಿ ಎಂದು ತಿಳಿದುಬಂದಿದೆ. ಆದರೆ ಸಾಯಿರಾಮ್ ಮತ್ತು ಗಾದಿಲಿಂಗ ಕೂಡ ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ. ಸಾಯಿರಾಮ್ ಈ ಹಿಂದೆಯೂ ಇದೇ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೋಕಾ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಸ್ವತಃ ಎಸ್ಪಿಯವರೇ ತಮ್ಮ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ರವಾನೆ ಮಾಡಿದ್ದಾರೆ.
https://www.newsics.com/2026/05/10/a-rape-occurs-every-18-minutes-in-india-ncrb-report/