newsics.com
ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಬುಧವಾರ(ಆ.21) ಭಾರತ ಬಂದ್ಗೆ ಕರೆ ನೀಡಿವೆ.
ಈ ಬಂದ್ಗೆ ಉತ್ತರದ ರಾಜ್ಯಗಳಲ್ಲಿ ಹೆಚ್ಚು ಸ್ಪಂದನೆ ಸಿಗುವ ಸಾಧ್ಯತೆಯಿದ್ದು, ಪರಿಸ್ಥಿತಿ ಗಮನಿಸಿ ಸೂಕ್ತ ಕ್ರಮ ಜರುಗಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್ಎಸಿಡಿಎಒಆರ್) ಸರ್ಕಾರದ ಮುಂದಿಟ್ಟಿದೆ.
ತುರ್ತು, ಆಂಬ್ಯುಲೆನ್ಸ್ ಸೇವೆಗಳು, ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಸಕ್ರಿಯವಾಗಿರಲಿವೆ. ಅಗತ್ಯ ಔಷಧಿಗಳನ್ನು ಒದಗಿಸಲು ಫಾರ್ಮಸಿಗಳು ಸಹ ತೆರೆದಿರುತ್ತವೆ. ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಶಾಲಾ-ಕಾಲೇಜುಗಳು ಎಂದಿನಂತೆ ಇರುತ್ತವೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕದಲ್ಲೂ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕವಾಗಿ ರಜೆ ಘೋಷಿಸಲಾಗಿಲ್ಲ. ಕರ್ನಾಟಕದಲ್ಲಿ ಈ ಬಂದ್ ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಯಾವುದೇ ಉದ್ವಿಗ್ನತೆಯನ್ನು ತಪ್ಪಿಸಲು ಎಲ್ಲಾ ಜಿಲ್ಲೆಗಳಾದ್ಯಂತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು. ಭಾರತ್ ಬಂದ್ಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಲ್ಲ ಎಸ್ಪಿಗಳಿಗೂ ಸೂಚನೆ ನೀಡಲಾಗಿದೆ.
ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!
ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್ಗೆ ದೀದಿ ಆಪ್ತರ ಪ್ರಶ್ನೆ
22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್