newsics.com/ನ್ಯೂಸಿಕ್ಸ್
ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬರುವ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಯಷ್ಟೇ ಅಲ್ಲದೇ ಇದೀಗ ಅದೇ ಜಾಗದಲ್ಲಿಯೇ ಟೈಮರ್ ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ್,ಬಾಂಬ್ ಇಟ್ಟಿದ್ದಾರೆಂದು ಕರೆ ಮಾಡಿದ ವ್ಯಕ್ತಿಯನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದ್ದು, ತನಿಖೆ ಚುರುಕುಗೊಂಡಿದೆ ಎಂದು ಗೃಹ ಸಚಿವರು ಹೇಳಿದರು.
ಪ್ರಧಾನಿ ಮೋದಿ ಅವರ ಭೇಟಿಯ ಕೇವಲ ಎರಡು ಗಂಟೆಗಳ ಮುಂಚೆ ಈ ಜಿಲೆಟಿನ್ ಪತ್ತೆಯಾಗಿದೆ. ಈ ಪ್ರಕರಣದ ಗಂಭೀರತೆ ಅರಿತು ಎನ್ ಐ ಎ (NIA)’ ಕೂಡ ತನಿಖೆಗೆ ಮುಂದಾಗಿದ್ದಾರೆ, ಇದಕ್ಕೆ ರಾಜ್ಯ ಸರ್ಕಾರವು ಸಂಪೂರ್ಣ ಸಹಕಾರ ನೀಡತ್ತದೆ ಎಂದು ಭರವಸೆ ನೀಡಿದರು.
ಪ್ರಧಾನಿ ಬರೋ ಕಾರ್ಯಕ್ರಮಕ್ಕೆ ಹೈ ಲೆವಲ್ ಸೆಕ್ಯೂರಿಟಿ ಇರುತ್ತೆ. ನಾವು ಹಾಗೂ ಕೇಂದ್ರ ಸೆಕ್ಯೂರಿಟಿ ಕೊಡುತ್ತೇವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಭದ್ರತೆ ನೀಡಿರುತ್ತೇವೆ. ಕಾರ್ಯಕ್ರಮಕ್ಕೆ ಬರುವ ಎರಡು ಗಂಟೆ ಮುಂಚೆ ಅಂದರೆ ಬೆಳಿಗ್ಗೆ 9 ಗಂಟೆಗೆ ಜಿಲೆಟಿನ್ ಕಂಡು ಹಿಡಿದಿದ್ದಾರೆ. ಇದು ಒಳ್ಳೆಯ ಕೆಲಸ. ಆದರೆ ಟೆರರಿಸಂಗೆ ಲಿಂಕ್ ಇರುವ ವಿಚಾರ ಈಗಲೇ ಹೇಳೋದಕ್ಕೆ ಬರಲ್ಲ. ತನಿಖೆ ಬಳಿಕ ನೋಡೋಣ ಎಂದರು.
ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ