Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಟ್ವಿಸ್ಟ್ : ಉದ್ಯಮಿಯ ಕರಾಳ ಮುಖ ಬಯಲು ಮಾಡಿದ ಪತ್ನಿ
ಕರ್ನಾಟಕಪ್ರಮುಖ

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಟ್ವಿಸ್ಟ್ : ಉದ್ಯಮಿಯ ಕರಾಳ ಮುಖ ಬಯಲು ಮಾಡಿದ ಪತ್ನಿ

Share
2 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧದ 1.5 ಕೋಟಿ ಬ್ಲ್ಯಾಕ್‌ಮೇಲ್ ಆರೋಪಕ್ಕೆ ಹೊಸ ತಿರುವು ಸಿಕ್ಕಿದೆ. ಪತಿ ಕಾರ್ತಿಕ್ ಸುಳ್ಳು ದೂರು ನೀಡಿದ್ದಾನೆ ಎಂದು ಆತನ ಪತ್ನಿ ಹರ್ಷಿತಾ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಪತಿ ಕಾರ್ತಿಕ್ ನ ಲೈಂಗಿಕ ಅಕ್ರಮ ಮತ್ತು ವಂಚನೆಯ ಜಾಲವನ್ನು ಸಾಕ್ಷಿಸಮೇತ ಪತ್ನಿಯೇ ಪೊಲೀಸರಿಗೆ ರವಾನಿಸಿದ್ದು, ಉದ್ಯಮಿ ಕಾರ್ತಿಕ್ ನ ಮುಖವಾಡ ಕಳಚಿ ಬಿದ್ದಿದೆ.

ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು, ಸಾಧನಾ ಶೆಟ್ಟಿ ವಿರುದ್ಧ ಆತ ಹೊರಿಸಿರುವ ಆರೋಪಗಳೂ ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಮಾಹಿತಿ ನೀಡಿದ್ದಾರೆ.

ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕನೆಂದು ಹೇಳಿಕೊಂಡಿರುವ ಕಾರ್ತಿಕ್, ತನಗೆ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ನನ್ನ ಖಾಸಗಿ ಫೋಟೋಗಳನ್ನು ಪತ್ನಿ ಹರ್ಷಿತಾಗೆ ಕಳುಹಿಸಿದ್ದಲ್ಲದೆ ನನ್ನ ಬಳಿ ಕೋಟಿಗಟ್ಟಲೆ ಹಣ ಕೇಳಿದ್ದಾಳೆ ಎಂದು ಆರೋಪಿಸಿದ್ದ. ಆದರೆ ಈ ಪ್ರಕರಣಕ್ಕೀಗ ಆತನ ಪತ್ನಿಯಿಂದಲೇ ಸ್ಫೋಟಕ ತಿರುವು ಸಿಕ್ಕಿದೆ. ಹರ್ಷಿತಾ ಜಯನಗರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತನ್ನ ಪತಿ ಸೃಷ್ಟಿಸಿರುವ ಬ್ಲ್ಯಾಕ್‌ಮೇಲ್ ಕಥೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

 

ಪತ್ನಿ ಹರ್ಷಿತಾ ಜಯನಗರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಇದೆಲ್ಲವೂ ತನ್ನ ಪತಿ ಸೃಷ್ಟಿಸಿರುವ ಬ್ಲ್ಯಾಕ್‌ಮೇಲ್ ಕಥೆ. ಸಾಧನಾ ಶೆಟ್ಟಿ ಯಾವತ್ತೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ನನ್ನ ಪತಿಯೇ ತನ್ನ ಲೈಂಗಿಕ ಅಕ್ರಮಗಳನ್ನು ಮುಚ್ಚಿಹಾಕಲು ಆಕೆಯನ್ನು ಬ್ಲ್ಯಾಕ್‌ಮೇಲರ್ ಎಂದು ಚಿತ್ರಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಕಾರ್ತಿಕ್ ಒಬ್ಬ ದೊಡ್ಡ ಉದ್ಯಮಿಯೇನಲ್ಲ, ಆತ ಕೇವಲ ತನ್ನ ಕ್ಲಿನಿಕ್‌ನ ಮಾರ್ಕೆಟಿಂಗ್ ನೋಡಿಕೊಳ್ಳುತ್ತಿದ್ದ ಕೆಲಸಗಾರ ಅಷ್ಟೇ ಎಂದು ಕ್ಲಿನಿಕ್​ನ ನಿರ್ದೇಶಕಿಯೂ ಆಗಿರುವ ಹರ್ಷಿತಾ ತಿಳಿಸಿದ್ದಾರೆ.

 

ಮದುವೆಯಾಗುವುದಾಗಿ ನಂಬಿಸಿ ಸಾಧನಾ ಶೆಟ್ಟಿಯನ್ನು ಹೈದರಾಬಾದ್, ಬೆಂಗಳೂರು ಮತ್ತು ಮಾಲ್ಡೀವ್ಸ್‌ಗೆ ಕರೆದೊಯ್ದಿದ್ದ ಕಾರ್ತಿಕ್, ಆಕೆಗಾಗಿ ಹೈದರಾಬಾದ್​ನಲ್ಲಿ ಪಿಜಿ ವ್ಯವಸ್ಥೆಯನ್ನೂ ಮಾಡಿದ್ದ. ಆದರೆ ಆತನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ನಂತರ 2025ರ ಆಗಸ್ಟ್ 8ರಂದು ಕಾರ್ತಿಕ್ ನಿವಾಸಕ್ಕೆ ಆಗಮಿಸಿದ್ದ ಸಾಧನಾ, ಆತ ನನಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾನೆಂದು ಕುಟುಂಬಸ್ಥರ ಮುಂದೆ ಆರೋಪಿಸಿದ್ದಳು. ಈ ವೇಳೆ ನಮ್ಮ ಬಳಿ ಹಣವಿದೆ ಎಂದು ಅವಳು ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಕಾರ್ತಿಕ್ ತನ್ನ ಪತ್ನಿಯನ್ನು ನಂಬಿಸಿದ್ದ.

ಸಾಧನಾ ಪೊಲೀಸರಿಗೆ ದೂರು ನೀಡಿದರೆ ಕಷ್ಟ ಎಂದು ಕಾರ್ತಿಕ್, ಆಕೆಯನ್ನೇ ಸಿಲುಕಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತರ ಸಹಾಯದಿಂದ ಆಕೆಯ ಫೋನ್ ಕಳವು ಮಾಡಿಸಿ, ವಾಪಸ್ ನೀಡಿದ್ದಲ್ಲದೆ ಸಾಧನಾಗೆ ಹಲವು ಬಾರಿ ಬೆದರಿಕೆ ಕರೆಯನ್ನೂ ಮಾಡಿದ್ದ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆಂದು ಕಥೆಯನ್ನೂ ಕಟ್ಟಿದ್ದ. ಇಷ್ಟೆಲ್ಲಾ ಆದ ನಂತರ ಪತಿ ಬದಲಾಗಿದ್ದಾನೆಂದು ಹರ್ಷಿತಾ ನಂಬಿದ್ದರು. ಆದರೆ ಸಾಧನಾ ಕಳುಹಿಸಿದ ಸಾಕ್ಷ್ಯಗಳನ್ನು ನೋಡಿದ ಬಳಿಕ ಹರ್ಷಿತಾ ಕೂಡ ಕಂಗಾಲಾಗಿದ್ದರು.

ಕಾರ್ತಿಕ್ ಕೇವಲ ಸಾಧನಾ ಮಾತ್ರವಲ್ಲದೆ ಇನ್ನೂ ಹಲವು ಯುವತಿಯರಿಗೆ ಇದೇ ರೀತಿ ವಂಚಿಸಿರುವುದು ಅವರಿಗೆ ಯುವತಿಯಿಂದ ತಿಳಿದುಬಂತು. ನಂತರ ಎರಡು ತಿಂಗಳಿಂದ ಪತಿಯಿಂದ ದೂರವಿದ್ದ ಆಕೆ, ಪ್ರಕರಣ ಸಂಬಂಧ ಮಾಹಿತಿ ಕೇಳಿದ ಪೊಲೀಸರ ಮುಂದೆ ಪತಿಯ ಕರಾಳ ಮುಖ ಬಯಲಿಗೆಳೆದಿದ್ದಾರೆ.

https://www.newsics.com/2026/05/13/n-rangaswamy-takes-oath-as-puducherry-cm/

TAGGED:Twist in Kannada influencer blackmail case: Businessman's wife exposes his dark side
Share This Article
Facebook Twitter Copy Link Print
Previous Article N. Rangaswamy ಪುದುಚೇರಿಯ ಸಿಎಂ ಆಗಿ ಎನ್. ರಂಗಸ್ವಾಮಿ ಪ್ರಮಾಣವಚನ ಸ್ವೀಕಾರ
Next Article TVK Vijay ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?