Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇವಸ್ಥಾನದೊಳಗೆ ಪ್ರವೇಶಿಸಿದ್ದಕ್ಕೆ ಮಹಿಳೆಯರಿಗೆ ಚಪ್ಪಲಿ ಹಾರ ಹಾಕಿ, ಅರೆ ನಗ್ನ ಮೆರವಣಿಗೆ ಮಾಡಿದ ಸ್ಥಳೀಯ ಗುಂಪು
ದೇಶಪ್ರಮುಖ

ದೇವಸ್ಥಾನದೊಳಗೆ ಪ್ರವೇಶಿಸಿದ್ದಕ್ಕೆ ಮಹಿಳೆಯರಿಗೆ ಚಪ್ಪಲಿ ಹಾರ ಹಾಕಿ, ಅರೆ ನಗ್ನ ಮೆರವಣಿಗೆ ಮಾಡಿದ ಸ್ಥಳೀಯ ಗುಂಪು

Share
2 Min Read
SHARE

newsics.com/ನ್ಯೂಸಿಕ್ಸ್

ಮುಂಬೈ : ಅಸಮಾನತೆ ಈಗಲೂ ಸಾಮಾಜಿಕ ಪಿಡುಗಾಗಿ ಬೇರುಬಿಟ್ಟಿದೆ ಎನ್ನುವುದನ್ನು ಇದು ಮತ್ತೊಮ್ಮೆ ನೆನಪಿಸಿದೆ. ತಮ್ಮದೇ ಸಮುದಾಯದ ಯುವಕನೊಬ್ಬ ದೇವಸ್ಥಾನ ಪ್ರವೇಶಿಸಿರುವುದನ್ನು ಪ್ರಶ್ನಿಸಿರುವ ಗುಂಪೊಂದು ಮಹಿಳೆಯರಿಗೆ ಚಪ್ಪಲಿ ಹಾರ ಹಾಕಿ ಅರೆನಗ್ನ ಮೆರವಣಿಗೆ ಮಾಡಿ ಮಾನವೀಯತೆಯನ್ನೇ ಮರೆತು ಮೃಗೀಯವಾಗಿ ವರ್ತಿಸಿದೆ. ಈ ಘಟನೆ ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ  ನಡೆದಿದೆ.

ಮಹಿಳೆಯರು ಮತ್ತು ಅವರ ಮನೆಯವರು ತಮಗೆ ವಿಧಿಸಿದ್ದ ಸಾಮಾಜಿಕ ಬಹಿಷ್ಕಾರವನ್ನು ವಿರೋಧಿಸಿದ್ದರಿಂದ ಈ ರೀತಿ ಅಮಾನುಷವಾಗಿ ನಡೆದುಕೊಳ್ಳಲಾಗಿದೆ.

ರಜಪೂತ್‌ ಜಾತಿ ಪಂಚಾಯತ್‌ ಈ ಹಿಂದೆ ಅದರದ್ದೇ ಸಮುದಾಯದ ಕುಟುಂಬವೊಂದಕ್ಕೆ ದೇವಾಲಯಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು. ಆದರೆ ದೇವಾಲಯಕ್ಕ ಭೇಟಿ ನೀಡುವ ಮೂಲಕ ಈ ಕುಟುಂಬ ದೇವರೂ ತಮಗೂ ಸೇರಿದವನು ಎಂದು ಸಮಾನತೆಯ ಪಾಠ ಸಾರಲು ಯತ್ನಿಸಿತ್ತು.

ದೇವಸ್ಥಾನದ ಪರಿಸರದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂತ್ರಸ್ತ ಕುಟುಂಬದ ಯುವಕನೊಬ್ಬ ದೇಗುಲ ಪ್ರವೇಶಿಸಿದ್ದ. ತನ್ನ ಕುಟುಂಬ ಯಾವುದೇ ತಪ್ಪು ಮಾಡಿಲ್ಲ, ಮತ್ತೆ ತಾವ್ಯಾಕೆ ದೇಗುಲದಿಂದ ಹೊರಗಿರಬೇಕು ಎನ್ನುವುದು ಆತನ ವಾದವಾಗಿತ್ತು. ಆತನ ದೇಗುಲ ಪ್ರವೇಶ ಆ ಗುಂಪಿಗೆ ಇಷ್ಟವಾಗಲಿಲ್ಲ.

ರಜಪೂರ್‌ ಸಮುದಾಯದ ಯುವಕ ದೇಗುಲ ಪ್ರವೇಶಿಸಿದ್ದನ್ನು ವಿರೋಧಿಸಿದ ಗುಂಪು ಆತನ ಮನೆ ಮೇಲೆ ದಾಳಿ ನಡೆಸಿತು. ಕಬ್ಬಣದ ರಾಡ್‌, ದೊಣ್ಣೆ ಹಿಡಿದು ಆತನ ಮನೆಯವರನ್ನು ಆ ಗುಂಪು ಥಳಿಸಿತು. ಅದರಲ್ಲೂ ಮಹಿಳೆಯರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿತು. ದೂರು ಕೊಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಬೆದರಿಕೆಯನ್ನೂ ಒಡ್ಡಿತು.

ಕಾಂತ ಪ್ರೇಮ್‌ ರಜಪೂತ್‌, ಗೀತಾ ರಜಪೂತ್‌ ಮತ್ತು ಅಂಜಲಿ ಕೇಂದ್ರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು. ಇದರಿಂದ ಮತ್ತಷ್ಟು ಕೆರಳಿದ ಬಹಿಷ್ಕಾರ ವಿಧಿಸಿದ ಗುಂಪು ಈ ಮಹಿಳೆಯರನ್ನು ರಸ್ತೆಗೆ ಎಳೆದು ಬಟ್ಟೆಯನ್ನು ಹರಿದು ಹಾಕಿ, ಅವರನ್ನು ಅರೆನಗ್ನರನ್ನಾಗಿ ಮಾಡಿದ್ದಲ್ಲೆ ಕೂದಲನ್ನು ಕತ್ತರಿಸಿ ಕ್ರೌರ್ಯ ಮೆರೆಯಿತು. ಬಳಿಕ ಅವರ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಸುಮಾರು 2 ಕಿ.ಮೀ.ನಷ್ಟು ಮೆರವಣಿಗೆ ನಡೆಸಿತು. ಅಲ್ಲದೆ ಬಲವಂತವಾಗಿ ಹಲವರ ಪಾದ ಸ್ಪರ್ಶಿಸುವಂತೆಯೂ ಮಾಡಲಾಯಿತು.

ವೈರಲ್‌ ಆಗಿರುವ ವಿಡಿಯೊದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದರೂ ನೆರೆದವರು ಸಹಾಯಕ್ಕೆ ಧಾವಿಸದೆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿರುವುದು ಕಂಡು ಬಂದಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮುಖ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಪ್ರಕರಣದ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

https://x.com/ANI/status/2055519502297895121?ref_src=twsrc%5Etfw%7Ctwcamp%5Etweetembed%7Ctwterm%5E2055519502297895121%7Ctwgr%5Ed3d6081ceca4c261641128016e24d9e48b99ff2e%7Ctwcon%5Es1_c10&ref_url=https%3A%2F%2Fd-3775156305907276998.ampproject.net%2F2605071401000%2Fframe.html

https://www.newsics.com/2026/05/17/indian-youth-congress-sacks-entire-kpycc-office-bearers-including-deepika-reddy-bindu-gowda/

TAGGED:Local group garlands women with slippers and parades them semi-naked for entering temple
Share This Article
Facebook Twitter Copy Link Print
Previous Article ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ KPYCC ಪದಾಧಿಕಾರಿಗಳ ವಜಾ ಮಾಡಿದ ಭಾರತೀಯ ಯುವ ಕಾಂಗ್ರೆಸ್‌
Next Article Medicines Price Hike ಬಿಪಿ,ಶುಗರ್ ಸೇರಿ ದಿನಬಳಕೆ ಔಷಧಿಗಳ ಬೆಲೆ ಏರಿಕೆ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?