newsics.com
ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಗುರುವಾರ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್ ಗೆ ಬೆಳಗ್ಗೆ 7.30 ಕ್ಕೆ ಬಾಂಬ್ ಬೆದರಿಕೆ ಬಗ್ಗೆ ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ತರುವಾಯ, ಬೆಳಗ್ಗೆ 7.36 ಕ್ಕೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ಬೆದರಿಕೆಯ ಮೂಲದ ವಿವರಗಳು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.