Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ
ಕರ್ನಾಟಕಪ್ರಮುಖ

ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ : ಬಹುಕೋಟಿ ಹಗರಣದ ಕಿಂಗ್ಪಿನ್ ಶಿವಾನಂದ ನೀಲಣ್ಣವರ್ನನ್ನು ನ್ಯಾಯಾಲಯ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ವಿಚಾರಣೆ ವೇಳೆ ಕೋರ್ಟ್ ಹಾಲ್ನಲ್ಲಿ ನ್ಯಾಯಾಧೀಶರು ಹಾಗೂ ಆರೋಪಿ ನಡುವೆ ಮಹತ್ವದ ಸಂಭಾಷಣೆ ನಡೆದಿದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.


ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ್ ಕೆ.ಎನ್. ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸುಮಾರು 35 ಸಾವಿರ ಹೂಡಿಕೆದಾರರ 1 ಸಾವಿರ ಕೋಟಿ ರೂಪಾಯಿ ಹಗರಣ ಇದಾಗಿದ್ದು, ರಾಜ್ಯ ಹಾಗೂ ಹೊರರಾಜ್ಯಗಳಿಗೂ ತೆರಳಿ ತನಿಖೆ ನಡೆಸಬೇಕಿರುವುದರಿಂದ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರಿದ್ದರು.
ಇದೇ ವೇಳೆ ಆರೋಪಿ ತನಗೆ ಶುಗರ್ ಮತ್ತು ಹಾರ್ಟ್ ಪ್ರಾಬ್ಲಮ್ ಇರುವುದಾಗಿ ಹೇಳಿಕೊಂಡಾಗ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲು ನ್ಯಾಯಾಧೀಶರು ಸೂಚಿಸಿದರು. ಇನ್ನು “35 ಸಾವಿರ ಜನರಿಗೆ ಹಣ ಬೇಕಿಲ್ ನಾನು ಬೇಕಾಗಿದ್ದೇನೆ” ಎಂದ ಆರೋಪಿಗೆ ತಿರುಗೇಟು ನೀಡಿದ ನ್ಯಾಯಾಧೀಶರು, “ಅಮಾಯಕ ಜನರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ, ಸಾಕಷ್ಟು ಜನ ಹಣ ತಗೊಂಡು ಓಡಿಹೋಗಿದ್ದಾರೆ. ಇತಿಹಾಸದಿಂದ ಪಾಠ ಕಲಿಯಲು ಈ ಕಾನೂನು ತಂದಿದ್ದಾರೆ, ಧರ್ಮೋ ರಕ್ಷತಿ ರಕ್ಷಿತಃ” ಎಂದು ಶ್ಲೋಕದ ಉದಾಹರಣೆ ನೀಡಿ ಬುದ್ಧಿವಾದ ಹೇಳಿದರು. ಕೊನೆಗೆ ಕೋರ್ಟ್ ಹಾಲ್ನಿಂದ ಹೊರಬರುತ್ತಿದ್ದಂತೆ ಸಹೋದರನನ್ನು ಕಂಡು ಶಿವಾನಂದ ನೀಲಣ್ಣವರ್ ಕಣ್ಣೀರು ಹಾಕಿದ್ದಾರೆ.
ಸಿಐಡಿ ಡಿಜಿಪಿ ಭೀಮಾಶಂಕರ ಗುಳೇದ್ ನೇತೃತ್ವದ ತಂಡ ಈಗಾಗಲೇ ಪ್ರಾಥಮಿಕ ತನಿಖೆ ಮುಗಿಸಿದ್ದು, ಮಾಳಮಾರುತಿ ಪೊಲೀಸರು ಕಲೆಹಾಕಿದ್ದ ಎಲ್ಲಾ ಮಹತ್ವದ ದಾಖಲೆಗಳೊಂದಿಗೆ ಆರೋಪಿಯನ್ನು ಸೋಮವಾರ ಬೆಂಗಳೂರಿಗೆ ಕರೆದೊಯ್ದು ತೀವು ವಿಚಾರಣೆ ನಡೆಸಲಿದೆ.
ಹೂಡಿಕೆದಾರರ ಹಣ ನೀಡಲು ರೆಡಿ ಇದ್ದಾರೆ ಎಂಬ ಆರೋಪಿ ಪರ ವಕೀಲರ ವಾದವನ್ನು ಸದ್ಯಕ್ಕೆ, ಆಲಿಸಲು ನ್ಯಾಯಾಧೀಶರು ನಿರಾಕರಿಸಿದ್ದರು, ಇನ್ನೊಂದೆಡೆ, ಆರೋಪಿ ಪರ ವಕೀಲರಾದ ಮಂಜುನಾಥ ಜಿ.ಎಲ್. ಅವರು, ಇದು ಕೇವಲ ತಾಂತ್ರಿಕ ಕಾರಣಗಳಿಗಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘನೆಯಾಗಿದೆ ಎಂದು ಪೊಲೀಸರೆ ದಾಖಲಿಸಿರುವ ಸುಮೋಟೋ ಕೇಸ್ ಆಗಿದೆ. ಗ್ರಾಹಕರು ಯಾರೂ ದೂರು ನೀಡಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ. ವಿರೋಧಿಗಳು ತಪ್ಪು ಮಾಹಿತಿ ಹರಡುತ್ತಿದ್ದು ಈಗಾಗಲೇ ಬೇಲ್ಗಾಗಿ ಅರ್ಜಿ ಸಲ್ಲಿಸಿದ್ದೇವೆ” ಎಂದು ಶಿವಾನಂದ ನೀಲಣ್ಣವರ ಪರ ವಕೀಲರು ಹೇಳಿದರು.

ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO

TAGGED:Multi-crore fraud case; Shivananda Neelannavar remanded in custody for 10 days.
Share This Article
Facebook Twitter Copy Link Print
Previous Article ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO
Next Article ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ; ಅನುರಾಗ್ ಕಶ್ಯಪ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?