Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದ್ದು, ರಾಜ್ಯದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ದೇಶ ವಿದೇಶಗಳಿಂದಲೂ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ. ಅದೃಷ್ಟವಶಾತ್ ಈವರೆಗೆ ಸಫಾರಿ ಪ್ರದೇಶಗಳಲ್ಲಿ ಆನೆಗಳು, ಹುಲಿಗಳು ಸೇರಿದಂತೆ ಯಾವುದೇ ವನ್ಯಮೃಗಗಳು ಸಫಾರಿ ವಾಹನಗಳ ಮೇಲೆ ದಾಳಿ ಮಾಡಿ ಜೀವಹಾನಿ ಮಾಡಿದ ಘಟನೆಗಳು ಸಂಭವಿಸಿರುವುದಿಲ್ಲ. ಆದಾಗ್ಯೂ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.

ಸಫಾರಿ, ಆನೆ ಶಿಬಿರದ ಸನಿಹದಲ್ಲಿ ಆಂಬುಲೆನ್ಸ್ ಖಾತ್ರಿಗೂ ಸೂಚನೆ:

ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸಂಪೂರ್ಣ ಸುರಕ್ಷಿತವಾದ ಬಸ್ ಸಫಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಹಾಲಿ ಬಳಕೆಯಲ್ಲಿರುವ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಿ ಬಳಸುವ ಬಗ್ಗೆ ಕ್ರಮವಹಿಸಲು, ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡದಂತೆ ಮತ್ತು ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆಯ ಕಿಟ್ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಆಂಬುಲನ್ಸ್ ವಾಹನ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.

ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ

TAGGED:From now onsafaris in open vehicles will not be allowed in the state: Minister Ishwar Khandre orders
Share This Article
Facebook Twitter Copy Link Print
Previous Article ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ
Next Article ಮೆಲೋನಿಗೆ ಮೋದಿ ‘ಮೆಲೋಡಿ’ ಗಿಫ್ಟ್: ವೈರಲ್ ವಿಡಿಯೋ ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?