Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Monkeys stop the bus ಬಿಸಿಲಿಗೆ ಬಸವಳಿದ ಕೋತಿಗಳು: ಬಸ್ ನಿಲ್ಲಿಸಿ ವಾನರ ಪಡೆ ಮಾಡಿದ್ದೇನು? ವಿಡಿಯೋ ನೋಡಿ
ದೇಶಪ್ರಮುಖವೈರಲ್

Monkeys stop the bus ಬಿಸಿಲಿಗೆ ಬಸವಳಿದ ಕೋತಿಗಳು: ಬಸ್ ನಿಲ್ಲಿಸಿ ವಾನರ ಪಡೆ ಮಾಡಿದ್ದೇನು? ವಿಡಿಯೋ ನೋಡಿ

Share
2 Min Read
SHARE

newsics.com/ನ್ಯೂಸಿಕ್ಸ್

ವಿದರ್ಭ: ಕರ್ನಾಟಕ ಸೇರಿದಂತೆ ಭಾರತದ ಕೆಲವು ರಾಜ್ಯಗಳಲ್ಲಿ ಅಲ್ಲೊಂದು ಇಲ್ಲೊಂದು ಮಳೆಯಾಗುತ್ತಿದೆ. ಆದರೆ ಹಲವೆಡೆ ರಣಬಿಸಿಲು, ಬಿಸಿಗಾಳಿಯಿಂದ ಆತಂಕ ಸೃಷ್ಟಿಯಾಗಿದೆ. ಎಲ್ಲೆಡೆ ನೀರು ಬತ್ತಿದೆ. ಕಾಡುಗಳಲ್ಲೂ ನೀರಿಲ್ಲ. ಹೀಗಾಗಿ ಪ್ರಾಣಿಗಳು ಬಾಯಾರಿ, ಬಸವಳಿದ ನೀರು ಹುಡುಕುತ್ತಾ ನಾಡಿಗೆ, ರಸ್ತೆಗೆ ಬರುತ್ತಿವೆ.

ಬಾಯಾರಿದ ಕೋತಿಗಳು ಯಾವುದೇ ದಾರಿ ಕಾಣದೆ ಸಾರಿಗೆ ಬಸ್ ನಿಲ್ಲಿಸಿ ನೀರು ಕೇಳಿದ ಘಟನೆ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ನಡೆದಿದೆ.

ಖಂಡಲಾ ಘಾಟ್‌ನಲ್ಲಿ ಘಟನೆ

ಖಂಡಾಲಾ ಘಾಟ್‌ನ ಪುಸಾದ್ ಬಳಿ ಮಧ್ಯಾಹ್ನ 3 ಗಂಟೆ ವೇಳೆಗೆ ಮಹಾರಾಷ್ಟ್ರ ಸಾರಿಗೆ ಬಸ್‌ನ್ನು ಹಲವು ಕೋತಿಗಳು ತಡೆದು ನೀರಿಗಾಗಿ ಪರಿತಪಿಸಿದ ಘಟನೆ ನಡೆದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರು ಘಟನೆ ವಿವರಿಸಿದ್ದಾರೆ. ವಾಶಿಂನಿಂದ ಪುಸಾದ್‌ಗೆ ಪ್ರಯಾಣಿಕರ ಹೊತ್ತು ತೆರಳಿದ್ದ ಬಸ್ ಖಂಡಾಲಾ ಘಾಟ್‌ನಲ್ಲಿ ಪ್ರಯಾಣಿಸುತ್ತಿತ್ತು. ಕಾಡುಗಳಿಂದ ಕೂಡಿದ ಘಾಟ್ ವಲಯದಲ್ಲಿ ಒಂದೆರಡು ಕೋತಿಗಳು ದಿಢೀರ್ ಆಗಿ ಸಾರಿಗೆ ಬಸ್ ಎದುರಿಗೆ ಬಂದಿವೆ. ರಸ್ತೆಯಲ್ಲಿ ನಿಂತಿದೆ. ಬಸ್ ಹಾರ್ನ್ ಹೊಡೆದರು ಹತ್ತಿರ ಬಂದರೂ ಕೋತಿಗಳು ಕದಲಲಿಲ್ಲ. ಬಸ್‌ನ್ನೇ ನೋಡುತ್ತಾ ರಸ್ತೆಯಲ್ಲೇ ನಿಂತಿವೆ.

ಬಸ್ ಡ್ರೈವರ್ ತಕ್ಷಣವೇ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ್ದಾರೆ. ಬಳಿಕ ಹಾರ್ನ್ ಹೊಡೆದು ಕೋತಿಗಳನ್ನು ಓಡಿಸುವ ಪ್ರಯತ್ನ ಮಾಡಿದ್ದಾರೆ. ಕಂಡಕ್ಟರ್ ಕೂಡ ಕೋತಿಗಳನ್ನು ಓಡಿಸಲು ಶಬ್ದ ಮಾಡಿದ್ದಾರೆ. ಆದರೆ ರಣ ಬಿಸಿಲಿನಲ್ಲಿ ಕೋತಿಗಳು ಬಸ್ ಪಕ್ಕಕ್ಕೆ ಬಂದಿವೆ. ತಕ್ಷಣವೇ ಪ್ರಯಾಣಿಕರು ಕೋತಿಗಳು ತೀವ್ರ ಅಸ್ವಸ್ಥಗೊಂಡಿರುವುದು ಗಮನಿಸಿದ್ದಾರೆ. ಹೀಗಾಗಿ ಒಂದು ಕೋತಿಗೆ ಪ್ರಯಾಣಿಕನೊಬ್ಬ ನೀರಿನ ಬಾಟಲಿ ನೀಡಿದ್ದಾನೆ.

ಬಾಟಲಿ ನೀರು ಕುಡಿದ ಕೋತಿಗಳು

ನೀರು ಸಿಕ್ಕ ಖುಷಿಯಲ್ಲಿ ಕೋತಿಯೊಂದು ಬಾಟಲಿ ಎತ್ತಿ ಕುಡಿದಿದೆ. ಇತ್ತ ಹಲವು ಕೋತಿಗಳು ಈ ಬಾಟಲಿ ನೀರಿಗಾಗಿ ಜಗಳವಾಡಿವೆ. ಇದೇ ವೇಳೆ ಹಲವು ಪ್ರಯಾಣಿಕರು ತಮ್ಮ ಬಳಿ ಇದ್ದ ನೀರಿನ ಬಾಟಲಿಯ ಮುಚ್ಚಳ ತೆಗೆದು ಕೋತಿಗಳಿಗೆ ನೀಡಿದ್ದಾರೆ. ಕೋತಿಗಳು ಈ ಬಾಟಲಿ ಪಡೆದು ನೀರು ಕುಡಿದಿವೆ. ರಣಬಿಸಿಲಿನಿಂದ ಕಂಗಾಲಾಗಿದ್ದ ಕೋತಿಗಳು ಬಾಯಾರಿ ಬಸವಳಿದಿದ್ದವು. ಕೋತಿಗಳಿಗೆ ನೀರು ಸಿಗುವ ಯಾವುದೇ ದಾರಿ ಉಳಿದಿರಲಿಲ್ಲ. ಪ್ರಯಾಣಿಕರು ನೀರಿನ ಬಾಟಲಿ ಹಿಡಿದು ತೆರಳುತ್ತಿರುವುದನ್ನು ಕೋತಿಗಳು ಗಮನಿಸಿವೆ. ಹೀಗಾಗಿ ದಾರಿ ಬದಿಯಲ್ಲೇ ಕೋತಿಗಳು ನೀರಿಗಾಗಿ ಪರಿತಪಿಸುತ್ತಾ ನಿಂತಿವೆ.

ಕೆಲವೇ ಕ್ಷಣಗಳಲ್ಲಿ ಕಾಡಿನಿಂದ, ಸುತ್ತ ಮುತ್ತಲಿನಿಂದ ಹಲವು ಕೋತಿಗಳು ಆಗಮಿಸಿದೆ. ಪ್ರಯಾಣಿಕರು ತಮ್ಮಲ್ಲಿದ್ದ ಎಲ್ಲಾ ನೀರಿನ ಬಾಟಲಿಗಳನ್ನು ನೀಡಿದ್ದಾರೆ. ಕೆಲ ಪ್ರಯಾಣಿಕರು ಕೋತಿಗಳಿಗೆ ಬಾಟಲಿ ಮೂಲಕ ಕೋತಿಗಳ ಬಾಯಿಗೆ ನೀರು ಸುರಿದಿದ್ದಾರೆ. ಎಲ್ಲಾ ಕೋತಿಗಳು ನೀರು ಕುಡಿದಿದೆ. ಇದೇ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೂ ಬಾಟಲಿ ನೀರುಗಳನ್ನು ಕೋತಿಗಳಿಗೆ ನೀಡಿದ್ದಾರೆ.

Yavatmal – पुसदच्या खंडाळा घाटात तहानलेल्या माकडांचा आटापिटा; प्रवाशांनी पाजले पाणी
सध्या वाढत्या उन्हाळ्याच्या झळा केवळ माणसांनाच नव्हे, तर वन्यप्राण्यांनाही मोठ्या प्रमाणात सोसाव्या लागत असल्याचे ज्वलंत उदाहरण काल दुपारी तीन वाजताच्या सुमारास पुसदच्या खंडाळा घाटात पाहायला… pic.twitter.com/50pxx2ZnMR

— Jai Maharashtra News (@JaiMaharashtraN) May 20, 2026

60 ದಿನದಲ್ಲಿ ಅಮೆರಿಕ ಬಿಡಿ; ಭಾರತೀಯರನ್ನು ಕಾಡಲಾರಂಭಿಸಿದ ಲೇಆಫ್‌!

Marriage and divorce ಮದುವೆ ಬಳಿಕ ಮೇಕಪ್ ತೆಗೆದ ವಧು, ಬೆಚ್ಚಿಬಿದ್ದ ವರ! ವಿಚ್ಛೇದನಕ್ಕೆ ಅರ್ಜಿ

Share This Article
Facebook Twitter Copy Link Print
Previous Article Marriage and divorce ಮದುವೆ ಬಳಿಕ ಮೇಕಪ್ ತೆಗೆದ ವಧು, ಬೆಚ್ಚಿಬಿದ್ದ ವರ! ವಿಚ್ಛೇದನಕ್ಕೆ ಅರ್ಜಿ
Next Article GOOD MORNING | Today’s Horoscope ಇಂದಿ‌ನ ಪಂಚಾಂಗ/ರಾಶಿ‌ ಭವಿಷ್ಯ, 22-05-2026, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?