newsics.com/ನ್ಯೂಸಿಕ್ಸ್
ಬೆಳಗಾವಿ: ಖ್ಯಾತ ವೈದ್ಯ, ಕೆಎಲ್ಇ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) (Dinesh Lakshman Bhatkal) ಎಂಬುವರು ಗನ್ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಅಂಕೋಲಾ ಮೂಲದ ಡಾ. ದಿನೇಶ ಲಕ್ಷ್ಮಣ ಭಟ್ಕಳ ಅವರು ಬೆಳಗಾವಿಯ ಮಂಡೋಲಿ ರಸ್ತೆಯಲ್ಲಿನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯ ಗ್ಯಾಲರಿಯಲ್ಲಿ ತಲೆಗೆ ಶೂಟ್ ಮಾಡಿಕೊಂಡು ವೈದ್ಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾನ್ಸರ್ಗೆ ಹೆದರಿ ಪ್ರಾಣ ಬಿಟ್ರಾ ವೈದ್ಯ?
ಡಾ. ದಿನೇಶ ಲಕ್ಷ್ಮಣ ಭಟ್ಕಳ ಅವರು ಶ್ವಾಸಕೋಶ ಕ್ಯಾನ್ಸರ್ಗೆ ತುತ್ತಾಗಿದ್ದರು ಎನ್ನಲಾಗಿದೆ. ಕ್ಯಾನ್ಸರ್ ಬಂದ ಬಳಿಕ ನೊಂದಿದ್ದ ವೈದ್ಯ, ಇದೇ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಟಿಳಕವಾಡಿ ಸಿಪಿಐ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ಟಿಳಕವಾಡಿವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ ಮತ್ತೊಂದು ಹೂಡಿಕೆ ಜಾಲ ಪತ್ತೆ: ಈ ಕಂಪನಿಲಿ 15 ತಿಂಗಳಿಗೆ ಹಣ ಡಬಲ್!