Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಿಗೆ ಜಾಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್, ಬಾಂಗ್ಲಾದಿಂದ ಜೀವ ಬೆದರಿಕೆ
ದೇಶಪ್ರಮುಖ

ಪ್ರಧಾನಿಗೆ ಜಾಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್, ಬಾಂಗ್ಲಾದಿಂದ ಜೀವ ಬೆದರಿಕೆ

Share
2 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತ : ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಪ್ರಿಯ ಬಂಗಾಳಿ ತಿನಿಸು ನೀಡಿ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಜಲ್ಮುರಿ ಮಾರಾಟಗಾರನಿಗೆ ಪಾಕಿಸ್ತಾನ  ಮತ್ತು ಬಾಂಗ್ಲಾದೇಶದಿಂದ  ಬೆದರಿಕೆ ಕರೆಗಳು ಬರುತ್ತಿವೆ.

ಜಲ್ಮುರಿ  ಮಾರಾಟಗಾರ ಬಿಕ್ರಮ್ ಸೌಗೆ ಕಳೆದ ಕೆಲವು ದಿನಗಳಿಂದ ಕೊಲೆ ಬೆದರಿಕೆಗಳು ಬಂದಿವೆ. ಪದೇ ಪದೇ ಫೋನ್ ಮತ್ತು ವೀಡಿಯೊ ಕರೆಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಜಿದ್ದಾಜಿದ್ದಿನಿಂದ ಕೂಡಿದ್ದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಗ್ರೆಸ್ಸೀವ್ ಆಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ, ತಮ್ಮ ವಾಹವನ್ನು ನಿಲ್ಲಿಸಿ, ವಿಕ್ರಮ್ ಸಾವ್ ಎನ್ನುವ ವ್ಯಾಪಾರಿಯ ಬಳಿ ಹತ್ತು ರೂಪಾಯಿ ನೀಡಿ, ಜಾಲ್ಮುರಿ ಸವಿದಿದ್ದರು. ಇದರ ವಿಡಿಯೋ, ಬರೀ ಬಂಗಾಳದಲ್ಲಿ ಮಾತ್ರವಲ್ಲ, ನೆರೆ ದೇಶಗಳಲ್ಲೂ ವೈರಲ್ ಆಗಿದ್ದವು. ರಾತ್ರೋರಾತ್ರಿ ವಿಕ್ರಮ್ ಸಾವ್, ಫುಲ್ ಫೇಮಸ್ ಆಗಿ ಬಿಟ್ಟಿದ್ದರು. ಈಗ ಅದುವೇ, ಅವರ ಜೀವ ಬೆದರಿಕೆಗೆ ಕಾರಣವಾಗಿದೆ ಎಂದು ಇವರು ಅಳಲು ತೋಡಿಕೊಂಡಿದ್ದಾರೆ.

ಅಪರಿಚಿತ ವ್ಯಕ್ತಿಗಳು ಪದೇಪದೇ ನನಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಮತ್ತು ನಿಂದಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ನಂಬರ್’ಗಳಿಂದ ಪದೇಪದೇ ನನಗೆ ಫೋನ್’ಗಳು ಬರುತ್ತಿವೆ. ವಿಡಿಯೋ ಕಾಲ್ ಮೂಲಕವೂ ಬೆದರಿಕೆ ಹಾಕುತ್ತಿದ್ದಾರೆ. ನಿನ್ನನ್ನು ಮತ್ತು ನಿನ್ನ ಅಂಗಡಿಯನ್ನು ಬಾಂಬ್ ಹಾಕಿ ಉಡಾಯಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂದು ವಿಕ್ರಮ್ ಸಾವ್ ನೋವು ತೋಡಿಕೊಂಡಿದ್ದಾರೆ. ವಿಡಿಯೋ ಮೂಲಕ ಮಾತನಾಡುವಾಗ ಮಾರಕಾಸ್ತ್ರಗಳನ್ನು ತೋರಿಸುತ್ತಾರೆ ಎಂದು ಸುದ್ದಿಸಂಸ್ಥೆ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಅವರ ಬೆದರಿಕೆ ಮಾತುಗಳಿಗೆ ನಾನು ಏನನ್ನೂ ಮಾತನಾಡದೇ ಕಾಲ್ ಕಟ್ ಮಾಡುತ್ತಿದ್ದೇನೆ. ಅಷ್ಟೊತ್ತಿಗೆ ಬಾಂಗ್ಲಾದ ನಂಬರ್’ನಿಂದ ಮತ್ತೊಂದು ಫೋನ್ ಬರುತ್ತದೆ. ನೀನು ಇನ್ನೂ ಬದುಕಿದ್ದೀಯಾ ಎಂದು ಪ್ರಶ್ನಿಸುತ್ತಾರೆ, ಮಾತನಾಡುವಾಗ ಏನೇನೋ ಸನ್ನೆಯನ್ನು ಮಾಡುತ್ತಾರೆ. ಬೇರೆ ಬೇರೆ ನಂಬರ್’ನಿಂದ ದೂರವಾಣಿ/ವಿಡಿಯೋ ಕರೆಗಳು ಬರುತ್ತಿದೆ. ನಿನ್ನ ಅಂತ್ಯ ಸದ್ಯದಲ್ಲೇ ಆಗುತ್ತದೆ ಎಂದು ಬೆದರಿಸುತ್ತಿದ್ದಾರೆ, ನನಗೆ ರಕ್ಷಣೆ ಬೇಕು ಎಂದು ಇವರು ಪೊಲೀಸರಿಗೆ ಮನವಿಯನ್ನು ಮಾಡಿದ್ದಾರೆ. ಇದಕ್ಕೆ ಕೂಡಲೇ ಸ್ಪಂದಿಸಿರುವ ಬಂಗಾಳದ ಪೊಲೀಸರು, ಕೆಲವರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

ಕ್ರೂಸರ್ ವಾಹನ- ಲಾರಿ ನಡುವೆ ಡಿಕ್ಕಿ : ಒಂದೇ ಕುಟುಂಬದ ಐವರು ಬಲಿ

TAGGED:Are Bangladeshis driving autos in Bengaluru without any documents?Businessman who gave jalmuri to PM receives death threats from Pakistan
Share This Article
Facebook Twitter Copy Link Print
Previous Article ಕ್ರೂಸರ್ ವಾಹನ- ಲಾರಿ ನಡುವೆ ಡಿಕ್ಕಿ : ಒಂದೇ ಕುಟುಂಬದ ಐವರು ಬಲಿ
Next Article Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?